Category: ಕರಾವಳಿ

  • ಉಡುಪಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ- ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು
    , ,

    ಉಡುಪಿ ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ- ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

    ಉಡುಪಿ: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸುವ ಮೂಲಕ ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿದ ಆಯುಕ್ತ ಗುರುದತ್ತ ಹೆಗಡೆ, ಮಹೇಂದ್ರ ಕುಮಾರ್ ವಿರುದ್ಧದ ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿತನ…

    Continue Reading

  • ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ICU ಬೆಡ್ ಕೊರತೆ: “ಎಲ್ಲಾ ಜಿಲ್ಲೆಗಳ ರೋಗಿಗಳಿಗೂ ವೆನ್ಲಾಕ್‌ಯೇ ಗತಿ ಏಕೆ?”
    ,

    ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ICU ಬೆಡ್ ಕೊರತೆ: “ಎಲ್ಲಾ ಜಿಲ್ಲೆಗಳ ರೋಗಿಗಳಿಗೂ ವೆನ್ಲಾಕ್‌ಯೇ ಗತಿ ಏಕೆ?”

    ಮಂಗಳೂರಿನ ಜಿಲ್ಲಾ ಆಸ್ಪತ್ರೆ ವೆನ್ಲಾಕ್‌ನಲ್ಲಿ ತುರ್ತು ಚಿಕಿತ್ಸೆಗೆ ಅಗತ್ಯವಿರುವ ICU ಬೆಡ್‌ಗಳ ಕೊರತೆ ಎದುರಾಗಿದೆ ಎಂಬ ಆರೋಪ ಕೇಳಿಬಂದಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ತಕ್ಷಣವೇ ICU ಚಿಕಿತ್ಸೆ ಅಗತ್ಯವಿದ್ದರೂ, ಬೆಡ್‌ಗಳ ಲಭ್ಯತೆ ಇಲ್ಲದ ಕಾರಣ ರೋಗಿಗಳು ಹಾಗೂ ಅವರ ಕುಟುಂಬಸ್ಥರು ಪರದಾಡುವಂತಾಗಿದೆ ಎನ್ನಲಾಗಿದೆ. ಒಂದೆಡೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬರುವ ಬಡ ಮತ್ತು ಮಧ್ಯಮ ವರ್ಗದ ಜನರ ಸಂಖ್ಯೆ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ICU ಬೆಡ್‌ಗಳ ಕೊರತೆ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಸಮಯಕ್ಕೆ…

    Continue Reading

  • ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್!!
    , ,

    ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್!!

    ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2026ರ ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರನು ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.…

    Continue Reading

  • ಉಡುಪಿ: ಬಾಳೆ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ..!! 8.71 ಲಕ್ಷ ರೂ. ಮೌಲ್ಯದ ಬಾಳೆಹಣ್ಣು ನಾಶ
    , ,

    ಉಡುಪಿ: ಬಾಳೆ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ..!! 8.71 ಲಕ್ಷ ರೂ. ಮೌಲ್ಯದ ಬಾಳೆಹಣ್ಣು ನಾಶ

    ಉಡುಪಿ: ಬಾಳೆಕಾಯಿಗಳನ್ನು ತ್ವರಿತವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ  ಅಲೆವೂರು ಗ್ರಾಮದ ಹಲವು ಪ್ರದೇಶಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅಲೆವೂರು ಗ್ರಾಮದ ಕೆಮ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಲಿ ಪರಿಸರದಲ್ಲಿರುವ ಬಾಳೆಹಣ್ಣು ವ್ಯಾಪಾರಿಗಳ ಮೂರು ಗೋದಾಮುಗಳನ್ನು ಅಧಿಕಾರಿಗಳ ತಂಡ ಪರಿಶೀಲಿಸಿದೆ. ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿ ವಿವೇಕ್ ತ್ರಿಮಲೆ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು. ಸಾರ್ವಜನಿಕರಿಂದ ಬಂದ ಮಾಹಿತಿ…

    Continue Reading

  • ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು
    ,

    ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು

    ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಆಹಾರವನ್ನು ಪೂರೈಸುವ ಅಡುಗೆ ಸೇವಾ ಘಟಕವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಗುರುವಾರ ಪರಿಶೀಲಿಸಿದರು. ಪ್ರಯಾಣಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯವನ್ನು ಅಧಿಕಾರಿಗಳು ಪರಿಶೀಲಿಸಿದರು, ಜೊತೆಗೆ ಅದರ ತಯಾರಿಕೆ ಮತ್ತು ಸಾಗಣೆಯ ಸಮಯದಲ್ಲಿ ಅನುಸರಿಸಲಾದ ಸುರಕ್ಷತಾ ಶಿಷ್ಟಾಚಾರಗಳನ್ನು ಪರಿಶೀಲಿಸಿದರು. ಸಾರಿಗೆ ವಾಹನವು ಸಾಕಷ್ಟು ಶುಚಿತ್ವವನ್ನು ಕಾಯ್ದುಕೊಂಡಿದೆಯೇ, ಆಹಾರವನ್ನು ಸೂಕ್ತವಾಗಿ ಸಂಗ್ರಹಿಸಲಾಗಿದೆಯೇ ಮತ್ತು ಎಲ್ಲಾ ನಿಗದಿತ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂದು ಅವರು…

    Continue Reading

  • ಬೆಳ್ತಂಗಡಿ: ಸುಮಂತ್ ನಿಗೂಢ ಸಾವಿನ ಪ್ರಕರಣ- ತಂದೆ, ತಾಯಿ, ಸಹೋದರ ಸಹಿತ ಐವರ ಬ್ರೈನ್ ಮ್ಯಾಪಿಂಗ್
    , ,

    ಬೆಳ್ತಂಗಡಿ: ಸುಮಂತ್ ನಿಗೂಢ ಸಾವಿನ ಪ್ರಕರಣ- ತಂದೆ, ತಾಯಿ, ಸಹೋದರ ಸಹಿತ ಐವರ ಬ್ರೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣ ಗೇರುಕಟ್ಟೆ ಸಮೀಪದ ಸಂಭೋಳ್ಯದ ತಂದೆ, ತಾಯಿ, ಸಹೋದರ ಸಹಿತ ಐವರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಗೊಂಡಿದೆ. ಬೆಳ್ತಂಗಡಿ ತಾಲೂಕಿನ ನಾಳಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 2026ರ ಜ.14ರಂದು ಮುಂಜಾನೆ ಧನುಪೂಜೆಗೆ ತೆರಳಿದ್ದ ಗೇರುಕಟ್ಟೆ ಸಮೀಪದ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಮಂತ್ (15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಬಯಲಿಗೆಳೆಯಲು ಪೊಲೀಸ್ ಇಲಾಖೆ ಹರಸಾಹಸ ಪಟ್ಟಿದ್ದರೂ ಈ ಕೇಸ್ ನಿಗೂಢವಾಗಿಯೇ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಪರು ಪರೀಕ್ಷೆಯ ಪ್ರಯೋಗ…

    Continue Reading

  • ಬಂಟ್ವಾಳ: ಬೈಕ್ ಅಡ್ಡಗಟ್ಟಿ ತಲವಾರು ತೋರಿಸಿ ₹8 ಲಕ್ಷ ದರೋಡೆ: ನಾಲ್ವರು ದುಷ್ಕರ್ಮಿಗಳಿಗಾಗಿ ಶೋಧ
    , ,

    ಬಂಟ್ವಾಳ: ಬೈಕ್ ಅಡ್ಡಗಟ್ಟಿ ತಲವಾರು ತೋರಿಸಿ ₹8 ಲಕ್ಷ ದರೋಡೆ: ನಾಲ್ವರು ದುಷ್ಕರ್ಮಿಗಳಿಗಾಗಿ ಶೋಧ

    ಬಂಟ್ವಾಳ : ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ. ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್ ಆಧಾರದಲ್ಲಿ ಪೂರೈಸಿದ್ದ ಸಿಮೆಂಟ್ ವ್ಯಾಪಾರದ ನಗದು ಹಣವನ್ನು ವಸೂಲಿ ಮಾಡಿಕೊಂಡು ಮಯ್ಯದಿ ಅವರು ಬೈಕ್‌ನಲ್ಲಿ ಹಿಂದಿರುಗುತ್ತಿದ್ದರು. ಮುಲ್ಕಾಜೆಮಾಡದ ನಿರ್ಜನ ರಸ್ತೆಯಲ್ಲಿ ಬರುತ್ತಿದ್ದಂತೆ, ಎರಡು ಬೈಕ್‌ಗಳಲ್ಲಿ…

    Continue Reading

  • ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕೈಗೆ ಸಿಕ್ಕ ಅಕ್ರಮ ಮರಳು; ಚಾಲಕ ಸ್ಥಳದಿಂದ ಪರಾರಿ
    , ,

    ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕೈಗೆ ಸಿಕ್ಕ ಅಕ್ರಮ ಮರಳು; ಚಾಲಕ ಸ್ಥಳದಿಂದ ಪರಾರಿ

    ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿಯಮಿತ ತಪಾಸಣೆಯ ಸಮಯದಲ್ಲಿ, ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದ KA 21 B 0593 ನೋಂದಣಿ ಸಂಖ್ಯೆಯನ್ನು ಹೊಂದಿರುವ ಪಿಕಪ್ ವಾಹನವನ್ನು ನಿಲ್ಲಿಸಲು ಪೊಲೀಸರು ಸಿಗ್ನಲ್ ಮಾಡಿದರು. ಚಾಲಕ ವಾಹನವನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಾಹನದಲ್ಲಿ 30 ಬುಟ್ಟಿ ಮರಳು ಪೊಲೀಸರಿಗೆ ಸಿಕ್ಕಿದೆ. ಚಾರ್ಮಾಡಿ ಗ್ರಾಮದ ನಿವಾಸಿ ಫಯಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    Continue Reading

  • ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿ, ಇಬ್ಬರು ಮೃತ್ಯು
    ,

    ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿ, ಇಬ್ಬರು ಮೃತ್ಯು

    ಬೆಳ್ಳೂರು: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಬಳಿ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬಸ್ ಟೋಲ್ ಸಮೀಪ ಅಳವಡಿಸಿದ್ದ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಬಾಗ್ (64) ಹಾಗೂ ಬಸ್…

    Continue Reading

  • ವಿಶ್ವ ತುಳುವೇರ್ (ರಿ.): ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಜಿಲ್ಲಾ ಮಟ್ಟದ ತುಳು ಲಿಪಿ ಕಲಿಕಾ ಸ್ಪರ್ಧೆ
    ,

    ವಿಶ್ವ ತುಳುವೇರ್ (ರಿ.): ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಜಿಲ್ಲಾ ಮಟ್ಟದ ತುಳು ಲಿಪಿ ಕಲಿಕಾ ಸ್ಪರ್ಧೆ

    ಮಂಗಳೂರು : ವಿಶ್ವ ತುಳುವೇರ್ (ರಿ.) ಮಂಗಳೂರು ವತಿಯಿಂದ ತುಳು ಭಾಷೆ, ಲಿಪಿ ಹಾಗೂ ತುಳುನಾಡಿನ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ತುಳು ಲಿಪಿ ಕಲಿಕಾ ಸ್ಪರ್ಧೆ ಹಾಗೂ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ಆ.16ರಂದು ಕದ್ರಿ ಮಲ್ಲಿಕಟ್ಟೆಯ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸಹಕಾರಿ ಸಂಘ ಮತ್ತು ಸಂಘಗಳ ನೋಂದಣಿ ಇಲಾಖೆಯ ಹಿರಿಯ ಸಬ್ ಇನ್ಸ್‌ಪೆಕ್ಟರ್ ಶ್ರೀಯುತ ವಿಲಾಸ್…

    Continue Reading

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports