Category: ಕರಾವಳಿ
-

ಬೆಳ್ತಂಗಡಿ, ಉಪ್ಪಿನಂಗಡಿಯಲ್ಲಿ ಕಳ್ಳರ ಅಟ್ಟಹಾಸ: ಕೇರಳ ಮೂಲದ ಶಂಕಿತನ ಬೆನ್ನತ್ತಿದ ಪೊಲೀಸರು
ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನದ ಸರಣಿಯಲ್ಲಿ ಭಾಗಿಯಾಗಿದ್ದಾನೆಂದು ಶಂಕಿಸಲಾಗಿರುವ ಕೇರಳದ ಕುಖ್ಯಾತ ಶಂಕಿತನ ಬಗ್ಗೆ ಮಾಹಿತಿ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ಶಂಕಿತನನ್ನು ಕೇರಳದ ಕಣ್ಣೂರಿನ ತಳಿಪರಂಬು ನಿವಾಸಿ ತಂಗಚ್ಚ, ಅಲಿಯಾಸ್ ಮ್ಯಾಧ್ಯೂ ಅಲಿಯಾಸ್ ಬಶೀರ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಂಕಿತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾರಿಯಲ್ಲಿದೆ.ಕಳೆದ 48 ಗಂಟೆಗಳಲ್ಲಿ ಕಳ್ಳತನ…
-

ಮಂಗಳೂರು: ಬಾವಿಯಲ್ಲಿ ನೀರಲ್ಲ, ಡೀಸೆಲ್ ..!! ನಿವಾಸಿಗಳು ಕಂಗಾಲು
ಮಂಗಳೂರು: ಈ ಭಾಗದಲ್ಲಿ ಇರೋದು ಬಾವಿಗಳಾ ಅಥವಾ ಡೀಸೆಲ್ ಗುಂಡಿಗಳಾ ಅನ್ನೋ ಅನುಮಾನ ಈಗ ಶುರುವಾಗಿದೆ. ಯಾಕಂದ್ರೆ ಬಾವಿಯಿಂದ ನೀರು ಸೇದಿದರೆ ನೀರಿನ ಬದಲು ಡೀಸೆಲ್ ವಾಸನೆ ಮೂಗಿಗೆ ಅಪ್ಪಳಿಸುತ್ತದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋ ಹಾಗೆ ಕುಳಿತಿದ್ದಾರೆ. ಇಂತಹ ಸಮಸ್ಯೆ ಎದುರಾಗಿರೋದು ಎಲ್ಲಿ ಅಂತಿರಾ ಇಲ್ಲಿದೆ ಈ ಬಗ್ಗೆ ವರದಿ. ಇದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಬಲಿಪಗುರಿ ರಸ್ತೆಯ ನಿವಾಸಿಗಳಿಗೆ ಈಗ ಕುಡಿಯುವ ನೀರಿನದ್ದೇ ದೊಡ್ಡ ಚಿಂತೆಯಾಗಿದೆ. ಕಳೆದ ನವೆಂಬರ್…
-

ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಜೂಜಾಟದಲ್ಲಿ ತೊಡಗಿದ್ದ 17 ಮಂದಿ ಸೆರೆ
ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.17 ರಂದು ರಾತ್ರಿ 7:30 ಕ್ಕೆ ದಾಳಿ ಮಾಡಿದ್ದಾರೆ. ಜೂಜಾಟ ಆಡುತ್ತಿದ್ದ ಪಡಂಗಡಿಯ ಅಶೋಕ್(37) ,ಪಡಂಗಡಿಯ ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35), ವೇಣೂರು ಕತ್ತೋಡಿಬೈಲಿನ ರಮೇಶ್(40) , ಕುಕ್ಕೇಡಿ ಬರ್ನತ್ಯಾರಿನ ರಾಜೇಶ್(42), ಕಾರ್ಕಳ ಮುಗಿರಡ್ಡಸ ಪ್ರಮೀತ್(35), ನಾರಾವಿ ಅರಸಿಕಟ್ಟೆಯ ಕರುಣಾಕರ(38),…
-

ಮಂಗಳೂರು ಕುಂಟಿಕಾನ ಲಿಫ್ಟ್ ದುರಂತ: ಅನಧಿಕೃತ ಕಟ್ಟಡಕ್ಕೆ ಯಾರು ಹೊಣೆ? ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರ ಅಸಮಾಧಾನ
ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್ಲೈನ್ ಡೆಲಿವರಿ ಸಂಸ್ಥೆಯೊಂದರ ಸನ್ ರಾಯಲ್ ರೆಸಿಡೆನ್ಸಿ ಕಟ್ಟಡದಲ್ಲಿ ಲಿಫ್ಟ್ನಲ್ಲಿ ಸಿಲುಕಿ ನೌಫಲ್ ಎಂಬಾತ ಸಾವನ್ನಪ್ಪಿದ ದುರ್ಘಟನೆ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಘಟನೆ ಬಳಿಕ ಕಟ್ಟಡದ ಸುರಕ್ಷತೆ, ಲಿಫ್ಟ್ನ ಮಾನದಂಡಗಳು ಹಾಗೂ ಮಹಾನಗರ ಪಾಲಿಕೆಯ ಮೇಲ್ವಿಚಾರಣೆ ಕುರಿತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಹಿತಿಯ ಪ್ರಕಾರ, ವಾಣಿಜ್ಯ ಕಟ್ಟಡದ ಹೊರಭಾಗದಲ್ಲಿ ಅನಧಿಕೃತ ಜಾಕ್( Hoist), ಅಂದರೆ ಕಬ್ಬಿಣದ ಸಪೋರ್ಟ್ಗಳು ಮತ್ತು ಲೋಹದ ಶೀಟ್ಗಳನ್ನು ಬಳಸಿ ಕಟ್ಟಡದ ಕಾಮಗಾರಿ ವೇಳೆ ಕಲ್ಲು,…
-

ಅಪ್ರಾಪ್ತರಿಂದ ಬೈಕ್ ಚಾಲನೆ: ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ
ಬಂಟ್ವಾಳ:ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ ಮಾಲೀಕರಿಗೆ ತಲಾ ರೂ 25,000 ದಂಡವನ್ನು ವಿಧಿಸಿ ನ್ಯಾಯಾಲಯವು ಆದೇಶಿಸಿದೆ. ಏಪ್ರಿಲ್ 06 2026 ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್ ನಲ್ಲಿ KA-19-HT-9694 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಹಾಗೂ ಏಪ್ರಿಲ್ 28. 2026 ರಂದು ಬಿಸಿ ರೋಡ್ ನಲ್ಲಿ ಬಳಿ, KA05KG6785 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕರು ಚಾಲನೆ ಮಾಡಿರುವುದು ಬಂಟ್ವಾಳ ಸಂಚಾರ ಠಾಣಾ…
-

ಬೆಳ್ತಂಗಡಿ :ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯ ದಾರುಣ ಅಂತ್ಯ
ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ನಡೆದಿದೆ. ಬಳಂಜದ ಪ್ರಸಿದ್ದ ಅನಿಲ್ ಪಾರ್ಮ್ ನ ಅನಿಲ್ ಭಟ್ ಅವರ ಪತ್ನಿ ಶೈಲಜಾ (30) ಅಪಘಾತದಲ್ಲಿ ಸಾವೀಗೀಡಾದ ಮಹಿಳೆ.ಅನಿಲ್ ಭಟ್ ಮತ್ತು ಅವರ ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುದಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಪೋಲಿಸರು…
-

ಮಂಗಳೂರು: ಲಿಫ್ಟ್ನಲ್ಲಿ ಸಿಲುಕಿ 28 ವರ್ಷದ ಯುವಕನ ಸಾವು
ಮಂಗಳೂರು: ಲಿಫ್ಟ್ ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಮಂಗಳೂರಿನಲ್ಲಿ ಶನಿವಾರ ನಡೆದಿದೆ. ನಗರದ ಕುಂಟಿಕಾನ ಬಳಿಯ ಆನ್ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ನೌಫಾಲ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ಲಿಫ್ಟ್ನಲ್ಲಿ ಅವಘಡ ಸಂಭವಿಸಿದೆ. ಲಿಪ್ಟ್ ಗೆ ಸಾಮಾಗ್ರಿಗಳನ್ನು ತುಂಬಿ ಕೆಳಕ್ಕೆ ತೆರಳುವ ವೇಳೆ ಲಿಪ್ಟ್ ಏಕಾಏಕಿ ಮಧ್ಯೆ ನಿಂತಿದೆ. ಈ ವೇಳೆ ಸಹದ್ಯೋಗಿಗಳನ್ನು…
-

ಮೊಬೈಲ್ಗೆ ಬಂದ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ಕಳೆದುಕೊಂಡ ವ್ಯಕ್ತಿ
ಮಂಗಳೂರು: ಯಾರೋ ಅಪರಿಚಿತ ವಂಚಕರು ಮೊಬೈಲ್ಗೆ ಲಿಂಕ್ ಇರುವ ಎಸ್ಎಂಎಸ್ ಕಳುಹಿಸಿ ಮೊಬೈಲ್ ಹ್ಯಾಕ್ ಮಾಡುವ ಮೂಲಕ ವ್ಯಕ್ತಿಯೊಬ್ಬರ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ₹6,91,534 ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಕಾವೂರು ಮತ್ತು ಕುಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತರು ಯೂನಿಯನ್ ಬ್ಯಾಂಕ್ನ ಕಾವೂರು ಶಾಖೆಗೆ ತೆರಳಿ ಖಾತೆಯ ಸ್ಟೇಟ್ಮೆಂಟ್ ಪರಿಶೀಲಿಸಿದಾಗ, ಮೇ 3 ರಂದು ಯುಪಿಐ (UPI) ಮೂಲಕ ಅವರ ಖಾತೆಯಿಂದ ಪೇಮೆಂಟ್ಸ್ ಬ್ಯಾಂಕ್ನ ಖಾತೆಯೊಂದಕ್ಕೆ ಹಂತ ಹಂತವಾಗಿ…
-

ಬ್ಯಾಗ್ ಆರ್ಡರ್ ಮಾಡಲು ಹೋಗಿ ಸೈಬರ್ ಖದೀಮರ ಬಲೆಗೆ ಬಿದ್ದ ಮಹಿಳೆ
ಉಡುಪಿ: ಇನ್ಸ್ಟಾಗ್ರಾಮ್ ಜಾಹೀರಾತು ನಂಬಿ ಹ್ಯಾಂಡ್ ಬ್ಯಾಗ್ ಆರ್ಡರ್ ಮಾಡಲು ಹೋದ ಮಹಿಳೆಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಹಂತ ಹಂತವಾಗಿ ಬರೋಬ್ಬರಿ ₹9,00,442 ಕಳೆದುಕೊಂಡಿರುವ ದಾರುಣ ಘಟನೆ ಸಂತೆಕಟ್ಟೆ ಸಮೀಪ ನಡೆದಿದೆ. ಸಂತೆಕಟ್ಟೆಯ ಶಾಂತಿವನ ನಿವಾಸಿ ವಂಚನೆಗೊಳಗಾದ ಮಹಿಳೆ. ಇವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ bagvogue.co__ ಎಂಬ ಐಡಿಯಿಂದ ಬಂದಿದ್ದ ಹ್ಯಾಂಡ್ ಬ್ಯಾಗ್ ಮಾರಾಟದ ಜಾಹೀರಾತನ್ನು ನೋಡಿ, ಬ್ಯಾಗ್ ಖರೀದಿಸಲು ಮೆಸೇಜ್ ಮಾಡಿದ್ದರು. ವಂಚಕರು ಬ್ಯಾಗ್ ಬೆಲೆ ₹899 ಮತ್ತು ಡೆಲಿವರಿ ಚಾರ್ಜ್ ₹1950 ಸೇರಿ…
-

2016ರ ಮಾನಭಂಗ ಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ
ಉಡುಪಿ: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಹಾಗೂ ವಾರಂಟ್ ಆರೋಪಿಯನ್ನು ಕಾಪು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಭಿಜಿತ್ (34) ಎಂದು ಗುರುತಿಸಲಾಗಿದ್ದು, ಈತನನ್ನು ಪುಂಜಾಲಕಟ್ಟೆಯಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.ಆರೋಪಿಯು 2016ರಲ್ಲಿ ಮಲ್ಲಾರು ಪಕೀರಣಕಟ್ಟೆಯ ಬಳಿ ಮಹಿಳೆಯೊಬ್ಬರ ಮಾನಭಂಗಕ್ಕೆ ಯತ್ನಿಸಿದ್ದ. ಈ ಪ್ರಕರಣದ ವಿಚಾರಣೆ ಹಂತದಲ್ಲಿರುವಾಗ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಕಳೆದ ಆರು ವರ್ಷಗಳಿಂದ ಕಾಪು ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು.ಸದ್ಯ ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೇ 25ರವರೆಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











