Category: ಕರಾವಳಿ
-

ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಕೈದಿಗಳ ಕಳ್ಳಾಟ ಕಂಡು ಜೈಲಾಧಿಕಾರಿಗಳು ಶಾಕ್
ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳು ಗಾಂಜಾ ಡ್ರಗ್ಸ್ ಸಿಗರೇಟ್ ಸೇರಿದಂತೆ ಇತರೆ ಮಾದಕ ವಸ್ತುಗಳ ಪೂರೈಕೆ ಆಗುತ್ತಿರುವ ಬಗ್ಗೆ ಪೊಲೀಸ ಅಧಿಕಾರಿಗಳು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು ಆದರೆ ಇದೀಗ ಮಂಡ್ಯದ ಕಾರಾಗೃಹದಲ್ಲೂ ಕೂಡ ಗಾಂಜಾ ಹಾಗೂ ಮೊಬೈಲ್ ಗಳು ಪತ್ತೆಯಾಗಿವೆ. ಸೀನಿಮಿಯ ಶೈಲಿಯಲ್ಲಿ ಗಾಂಜಾ ಜೈಲಿಗೆ ಪೂರೈಕೆ ಆಗುತ್ತಿದ್ದು, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿ ಕೈದಿಗಳ ಕಳ್ಳಾಟ ಇದೀಗ ಬಯಲಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಕದೀಮರು ಪ್ಲಾಸ್ಟಿಕ್ ಸುತ್ತಿದಂತಹ…
-

ಮಂಗಳೂರಿನಲ್ಲಿ ಭಾರೀ ಪ್ರಮಾಣದ MDMA ವಶಕ್ಕೆ –ಯುವಕರನ್ನು ಗುರಿಯಾಗಿಸಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ
ಮಂಗಳೂರು : ನಗರದ ಜೆಪ್ಪಿನಮೊಗರು ಪ್ರದೇಶದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವೇಳೆ, ಕೆಎ-70-ಕೆ-3333 ಸಂಖ್ಯೆಯ ಬಜಾಜ್ ಫ್ರೀಡಂ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳನ್ನು ಮಂಗಳೂರಿನ ಪರ್ವೇಜ್ @ ದಾವೂದ್ ಪರ್ವೇಜ್ (40), ನಜರತ್ ಅಲಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ ರೂ. 46,50,000 ಮೌಲ್ಯದ…
-

ಬೆಳ್ತಂಗಡಿ: ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಬಾಲಕಿಯ ಅತ್ಯಾಚಾರ- ಇಬ್ಬರು ಅರೆಸ್ಟ್
ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ. 16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕೋ ಅಡಿಯಲ್ಲಿ…
-

ತಾಳೆ ಕುಂಬ್ರಿ ಕಾರ್ ಸುಟ್ಟ ಪ್ರಕರಣ ಬೇಧಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ
ಕಾರವಾರ: ಯಲ್ಲಾಪುರ ಅರಬೈಳ್ ಘಟ್ಟದ ತಾಳೆ ಕುಂಬ್ರಿ ಬಸ್ ನಿಲ್ದಾಣದ ಹತ್ತಿರ ಕಾರ್ ಸುಟ್ಟ ಪ್ರಕರಣವನ್ನು ಬ ಪೊಲೀಸರು ಪತ್ತೆ ಹಚ್ಚಿದ್ದಾರೆ ಹಳೆ ಹುಬ್ಬಳ್ಳಿಯ ಮೂವರು ಆರೋಪಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ದೀಪನ್ ಹೇಳಿದ್ದಾರೆ. ಕಾರವಾರದಲ್ಲಿ ಎಸ್ಪಿ ಕಚೇರಿಯಲ್ಲಿ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾರ್ ನಲ್ಲಿದ್ದ ನಿತೇಶ್ ಧಾಪಳೆ ಕೊಲೆಯಾದ ನಂತರ ಅವರನ್ನು ಕಾರ್ ಅಪಘಾತದಲ್ಲಿ ಸತ್ತ ರೀತಿಯಲ್ಲಿ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ ಎಂದರು. ಈ ಪ್ರಕರಣದಲ್ಲಿ ಆರೋಪಿತರಾದ ಸಿದ್ದಾರೂಢ ನಗರ ಹೆಗ್ಗರಿ ಹಳೆ ಹುಬ್ಬಳ್ಳಿಯ…
-

ಮಂಗಳೂರಿಗೆ ಮತ್ತೆ ಕಾಲಿಡಲಿದೆ “ಎಕ್ಕಾ ರಾಜಾ ರಾಣಿ.!!”
ಮಂಗಳೂರಿಗೆ ಖಡಕ್, ದಕ್ಷ ಪೊಲೀಸ್ ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ನಿಯುಕ್ತಿಯಾದಂತೆ ಇಲ್ಲಿ ಮತೀಯ ಗಲಭೆಗಳು ಪುಲ್ ಸ್ಟಾಪ್. ದ್ವೇಷ ಕಾರುವ ಭಾಷಣಕಾರರ ಪುಂಗಿ ಬಂದ್. ಡ್ರಗ್ಸ್ ದಂಧೆಕೋರರು ಗಪ್ ಚುಪ್. ಇದರ ಜೊತೆಗೆ ಮಸಾಜ್ ಪಾರ್ಲರ್ ಅಡ್ಡಾದಿಡ್ಡಿ ಕಸುಬಿ ಕೂಡ ಪೂರ್ತಿ ಬಾಗಿಲು ಹಾಕಿತ್ತು. ಇವಿಷ್ಟೇ ಅಲ್ಲ ರಮ್ಮಿ ಮೂಲಕ ಜೂಜು ಕೇಂದ್ರ ತೆರೆದು ಮಧ್ಯಮವರ್ಗದವರನ್ನು ಪೂರ್ತಿ ಬೋಳಿಸುತ್ತಿದ್ದ ಸ್ಕಿಲ್ ಗೇಮ್ ಅನ್ನುವ ಅಡ್ಡೆ ಬಾಗಿಲು ಹಾಕಿ ದಂಧೆಕೋರರು ಇಲ್ಲಿಂದ ಪಲಾಯನ ಮಾಡಿದ್ದರು. ಈ…
-

ಬಂಟ್ವಾಳ: ಮನೆಯ ಹಿಂಭಾಗದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹ*ತ್ಯೆ
ಬಂಟ್ವಾಳ : ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ (29) ಶನಿವಾರ ಬೆಳಿಗ್ಗೆ ತಮ್ಮ ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಮನೆಯವರೊಂದಿಗೆ ಊಟ ಮಾಡಿ ಹೊರಾಂಗಣದಲ್ಲಿ ಮಲಗಿದ್ದ ಹರ್ಷಿತ್, ಶನಿವಾರ ಬೆಳಿಗ್ಗೆ ಮನೆಯವರು ನೋಡುವಾಗ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಡಿದಾಗ ಮನೆಯ ಹಿಂಭಾಗದ ಗುಡ್ಡದ ಮರವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಯುವಕ ತಂದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯೊಂದಿಗೆ…
-

ವಿಟ್ಲ : 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಪೊಲೀಸ್ ಬಲೆಗೆ- ವಿದೇಶದಿಂದ ವಾಪಸಾಗುವ ವೇಳೆ ಬಂಧನ
ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಎಂಬಾತನು ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. ನಂ: 42/2015ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಹಲವು ಬಾರಿ ವಾರಂಟ್ ಜಾರಿಯಾಗಿತ್ತು.ಆರೋಪಿ ದಿನಾಂಕ ಏಪ್ರಿಲ್ 16ರಂದು ವಿದೇಶದಿಂದ ಮರಳಿದ ವೇಳೆ, ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ…
-

ಕ್ರೈಂ ವಾರ್ತೆಯ ಫಲಶೃತಿ: ನಿರಂತರವರದಿಗಾರಿಕೆಯಿಂದ ಕೆಮ್ಮಣ್ಣು ಪಡು ತೋನ್ಸೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗುತ್ತಿದ್ದ ಬಾರ್ & ರೆಸ್ಟೋರೆಂಟ್ ಮಾಲಿಕನ ವಿರುದ್ಧ ಪ್ರಕರಣ ದಾಖಲು..!!
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ಅಕ್ರಮ ವಾಣಿಜ್ಯ ಕಟ್ಟಡದ ಕಾಮಗಾರಿ ಬಗ್ಗೆ ನಮ್ಮ ಕ್ರೈಂ ವಾರ್ತೆ ಸುದ್ದಿ ವಾಹಿನಿಯಲ್ಲಿ ಕಳೆದ 2 ತಿಂಗಳಿನಿಂದ ನಿರಂತರ ವರದಿ ಮಾಡಿದ್ದು ಅದರ ಫಲಶೃತಿಯಂತೆ ಇಂದು ಕಟ್ಟಡ ಮಾಲೀಕ ಸಂಪತ್ ಕುಮಾರ್ ಶೆಟ್ಟಿ ಮೇಲೆ ಪೋಲಿಸರು ಸೋಮೊಟೋ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿ, ತಹಶೀಲ್ದಾರ, ಚೀಫ್ ಆಫೀಸರ್, ನಗರಾಭಿವೃದ್ಧಿ ಇಲಾಖೆ…
-

ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯಿಂದ ನಿಂದನೆ: ಯಕ್ಷಗಾನ ಕಲಾವಿದರ ಆರೋಪ
ಮಂಗಳೂರು: ಸ್ಥಳೀಯ ವಾಹಿನಿಯೊಂದರಲ್ಲಿ ಪ್ರಸಾರವಾದ ʼಯಕ್ಷ ತೆಲಿಕೆʼ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ʼಬುರುಡೆ ಗ್ಯಾಂಗ್ʼ ಎಂಬ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಗೆ ಮತ್ತು ಮಹಿಳಾ ಠಾಣೆಗೆ ದೂರು ನೀಡಲಾಗಿದೆ ಎಂದು ಯಕ್ಷಗಾನ ಕಲಾವಿದರಾದ ಸುಂದರ ರೈ ಮಂದಾರ, ಪ್ರಜ್ವಲ್ ಕುಮಾರ್ ಮತ್ತು ದಿನೇಶ್ ಕೊಡಪದವು ಹೇಳಿದರು. ಶುಕ್ರವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಂದರ ರೈ ಮಂದಾರ, ಈ ಕಾರ್ಯಕ್ರಮ ಕಳೆದ…
-

ಕಾಪು: ಲಾರಿಗೆ ಕಾರು ಢಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಾಯ
ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪಾಂಗಾಳ ಕಟ್ಟಿಕೆರೆ ಬಳಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಶ್ರೇಯಸ್ ಆಚಾರ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಏಪ್ರಿಲ್ 17ರ ಮುಂಜಾನೆ ಸುಮಾರು 12:30ರ ಸುಮಾರಿಗೆ ಮಂಗಳೂರಿನಿಂದ ಕೊಪ್ಪಳಕ್ಕೆ ಕೋಕ್ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಲಾರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಿಯಾ (Kia) ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. , ಅತೀ ವೇಗವಾಗಿ ಬಂದ ಕಾರು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











