Category: ಕರಾವಳಿ
-

ಮಂಗಳೂರು ಲಾಠಿ ಚಾರ್ಜ್ ಪ್ರಕರಣದ 101 ಆರೋಪಿಗಳಿಗೆ ಖುಲಾಸೆ
ಮಂಗಳೂರು: 2017 ರ ಏಪ್ರಿಲ್ 4ರಂದು ಮಂಗಳೂರಿನ ಕಮಿಷನರ್ ಕಛೇರಿ ಮುಂಭಾಗದಲ್ಲಿ ನಡೆದ ಲಾಠಿ ಚಾರ್ಜ್ ಸಂಬಂಧಿಸಿದಂತೆ ದಾಖಲಾದ ಪ್ರಕರಣಕ್ಕೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಒಟ್ಟು 101 ಆರೋಪಿಗಳನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಿದೆ. ಜಿಲ್ಲೆಯಲ್ಲಿ ನಡೆದ ಕೊಲೆಯೊಂದಕ್ಕೆ ಪೊಲೀಸರು ಅಮಾಯಕ ಅಹ್ಮದ್ ಖುರೇಶಿ ಎಂಬಾತನನ್ನು ಅಕ್ರಮವಾಗಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸದೇ ದೌರ್ಜನ್ಯ ನಡೆಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೆಲ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾದಾಗ…
-

ಬೆಳ್ತಂಗಡಿ : ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ
ಬೆಳ್ತಂಗಡಿ: ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ…
-

ಮಂಗಳೂರು: ಆದ್ಯಪಾಡಿಯಲ್ಲಿ ಅಕ್ರಮ ಕೆಂಪು ಗಣಿಗಾರಿಕೆ..!! 5 ಲಾರಿ ವಶ ಪಡೆದ ಪೊಲೀಸರು
ಮಂಗಳೂರು: ಆದ್ಯಪಾಡಿ, ವಿಮಾನ ನಿಲ್ದಾಣದ ಪಕ್ಕದಲ್ಲಿ ಅಕ್ರಮವಾಗಿ ಕೆಂಪು ಮಣ್ಣು ತೆಗೆಯುತ್ತಿದ್ದ ಕೊರೆಗೆ ಕಾವೂರು ಪೋಲಿಸರು ದಾಳಿ ನಡೆಸಿ ಐದು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ವಿಮಾನ ನಿಲ್ದಾಣದ ಅಕ್ಕ ಪಕ್ಕದಲ್ಲಿ ಮಣ್ಣು ತೆಗೆಯದಂತೆ ಸೊಚನೆ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಇವರಿಗೆ ಅಕ್ರಮವಾಗಿ ಕೆಂಪು ಮಣ್ಣು ತೆಗೆಯಲು ಅವಕಾಶ ನೀಡಿದವರು ಯಾರು?? ಅಕ್ರಮವಾಗಿ ಕೆಂಪು ಮಣ್ಣು ಸಾಗಿಸುತ್ತಿದ್ದ 5 ವಿಮಲ್ ಲಾರಿಯನ್ನು ಹಿಡಿದಿದ್ದಾರೆ ಎಂಬ ಮಾಹಿತಿ ಇದೆ ಹೀಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನೇಕ…
-

ಉಡುಪಿ: ವಾಟ್ಸಾಪ್ನಲ್ಲಿ ಬಂದ RTO ಚಲನ್ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.86 ಲಕ್ಷ ರೂ. ಪಂಗನಾಮ!
ಉಡುಪಿ : ವಾಟ್ಸಾಪ್ ಮೂಲಕ ಬಂದ ಎಪಿಕೆ ಫೈಲ್ ಡೌನ್ಲೋಡ್ ಮಾಡಿದ ಪರಿಣಾಮ ಹಲವಾರು ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಆನ್ಲೈನ್ ವಂಚನೆ ಒಳಗಾಗಿರುವ ಘಟನೆ ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪಡುಬಿದ್ರಿಯ ಹೆಜಮಾಡಿಯ ಅಬ್ದುಲ್ ಹಮೀದ್ ಅವರಿಗೆ ಏಪ್ರಿಲ್ 12 ರಂದು ಅವರ ಪರಿಚಯಸ್ಥ ಕುಮಾರಸ್ವಾಮಿ ಅವರ ಮೊಬೈಲ್ ಸಂಖ್ಯೆಯಿಂದ APK ಫೈಲ್ ಬಂದಿದ್ದು, ಫೈಲ್ ಡೌನ್ಲೋಡ್ ಮಾಡಿದ ನಂತರ ಅವರ ಬ್ಯಾಂಕ್ ಖಾತೆ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.ಏಪ್ರಿಲ್ 13 ರಂದು,…
-

ಕಾರ್ಕಳ: ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ FIR
ಕಾರ್ಕಳ: ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ, ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ಸೇರಿದಂತೆ ಗಣಿಕಾರಿಕೆ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಪ್ರದೇಶದ ಸರ್ವೇ ನಂ.281ರಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ನೇತೃತ್ವದಲ್ಲಿ ಏಪ್ರಿಲ್ 15ರಂದು ಬೆಳಿಗ್ಗೆ 8.20ಕ್ಕೆ ದಾಳಿ ನಡೆಸಲಾಯಿತು. ದಾಳಿ ವೇಳೆ…
-

ಬೆಳ್ತಂಗಡಿ: ವಿಚಾರಣೆಗೆ ಗೈರು- ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್…
-

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಸಾವು
ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ. ಎ.11ರಂದು ಮಹಾಕಾಳಿಪಡ್ಪಿಅಂಡರ್ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ. ವಾರದ…
-

ಬಂಟ್ವಾಳ: ಕಲ್ಲಿನಿಂದ ಹಲ್ಲೆ – ಯುವಕನಿಗೆ ಗಾಯ, ಆರೋಪಿ ವಶಕ್ಕೆ
ಬಂಟ್ವಾಳ: ಮಾಣಿ ನಿವಾಸಿ ವಿಶ್ವನಾಥ (28) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಏಪ್ರಿಲ್ 12 ರಂದು ಸಂಜೆ ನಡೆದಿದೆ. ಮನೆಯಲ್ಲಿದ್ದ ವೇಳೆ ಪರಿಚಯದ ನವೀನ್ ಎಂಬಾತನು ಸುಮಾರು ಒಂದು ವರ್ಷದ ಹಿಂದೆ ನಡೆದ ಗಲಾಟೆ ವಿಷಯವಾಗಿ ತಕರಾರು ತೆಗೆದು, ಕಲ್ಲಿನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ವಿಶ್ವನಾಥರನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ದೊರೆತ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 92/2026, ಕಲಂ…
-

ಆರಿಫ್ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ
ಮಂಗಳೂರು: ಅರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖಾ ತಂಡವು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಕೃತ್ಯದ ಸಂಚು ಮತ್ತು ಹಲ್ಲೆಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಅರ್ಶದ್ ಸೇರಿ ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಏರಿಕೆಯಾಗಿದ್ದು, ಹತ್ಯೆಯ ಹಿಂದಿನ ವ್ಯವಸ್ಥಿತ ಸಂಚಿನ ಹೂರಣ ಒಂದೊಂದಾಗಿ ಬಯಲಾಗುತ್ತಿದೆ. ಬಂಧಿತರ ಪೈಕಿ ಅರ್ಶದ್ ಈ ಕೊಲೆ ಕೃತ್ಯದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಈತ ಹಂತಕರಿಗೆ ಮಾರಕಾಸ್ತ್ರಗಳನ್ನು ಪೂರೈಸಿದ್ದಲ್ಲದೆ, ಪೊಲೀಸರ ಚಲನವಲನದ…
-

ಮೂಡುಬಿದಿರೆ: ಪದೇ ಪದೇ ಅಪಘಾತ: ರಾಷ್ಟ್ರೀಯ ಹೆದ್ದಾರಿಗೆ ಮಣ್ಣು ಸುರಿದು ಪ್ರತಿಭಟಿಸಿದ ಸ್ಥಳೀಯರು
ಮೂಡುಬಿದಿರೆ: ಪದೇ ಪದೇ ಅಪಘಾತ ನಡೆಯುತ್ತಿರುವ ರಿಂಗ್ ರೋಡ್ ಆಲಂಗಾರು -ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಗೆ ಸ್ಥಳೀಯರು ಸೋಮವಾರ ಟಿಪ್ಪರ್ ನಲ್ಲಿ ಮಣ್ಣು ಸುರಿದು ಮುಚ್ವಿ ಪ್ರತಿಭಟನೆ ನಡೆಸಿದರು. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ಭದ್ರತಾ ಕ್ರಮಗಳ ಕೊರತೆ ಎದ್ದು ಕಾಣು ತ್ತಿದೆ. ಕಳೆದ ಕೆಲ ದಿನಗಳಲ್ಲಿ ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದು ಹಲವು ಜೀವಗಳು ಬಲಿಯಾ ಗಿವೆ. ಸೋಮವಾರವೂ ಕಾರೊಂದು ಅಪಘಾತಕ್ಕೀಡಾಗಿ ಸವಾರರು ಗಾಯಗೊಂಡಿದ್ದರು. ಸಂಬಂಧಪಟ್ಟ ಅಧಿಕಾರಿಗಳು ಸಾವ೯ಜನಿಕರ ಮನವಿಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











