Category: ಕರಾವಳಿ
-

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ : 3 ತಿಂಗಳ ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ
ರಾಜ್ಯದಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರೆದಿದ್ದು, ಬೆಳಗಾವಿಯಲ್ಲಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಕುಟುಂಬವೊಂದು ಬೀದಿಗೆ ಬಿದ್ದಿದೆ. ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಕಂಪನಿ ಮನೆಯನ್ನು ಜಪ್ತಿ ಮಾಡಿದೆ. ಹೀಗಾಗಿ 3 ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದಿದೆ. ಸಾಲ ಕಟ್ಟಿಲ್ಲವೆಂದು ಫೈನಾನ್ಸ್ ಸಿಬ್ಬಂದಿ ಮನೆಯನ್ನು ಸೀಜ್ ಮಾಡಿದ್ದಾರೆ. ರಾಯಭಾಗ ತಾಲೂಕಿನ ಅಲಕನೂರ ಗ್ರಾಮದಲ್ಲಿ ಫೈನಾನ್ಸ್ ಕಂಪನಿ ಸಿಬ್ಬಂದಿಗಳು ಮನೆ ಸೀಜ್ ಮಾಡಿದ ಹಿನ್ನೆಲೆಯಲ್ಲಿ ಕುಟುಂಬ ಬೀದಿಗೆ ಬಿದ್ದಿದೆ. ಮನೆ ಸಾಮಾಗ್ರಿಯನ್ನೂ ತೆಗೆದುಕೊಳ್ಳಲು ಬಿಡದೇ ಸಿಬ್ಬಂದಿ ದರ್ಪ ಮೆರೆದಿದ್ದಾರೆ.…
-

ಮಂಗಳೂರು: ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಪೊಲೀಸರು- 6 ಮಂದಿ ಆರೋಪಿಗಳ ಬಂಧನ
ಮಂಗಳೂರು: ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಹೈದರಾಬಾದ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಶೇಖ್ ಕರೀಮುಲ್ಲಾ @ ರಸೂಲ್ (27), ಬುಡಿದಿನ್ನೆ ವಂಶಿ @ ಗುರು (21), ಪಂಡಿತಿ ಕ್ರಾಂತಿ ಕುಮಾರ್ (36), ಬಡೆ ಶ್ರೀನಿವಾಸ್ (38), ಉತ್ಸಲ ಸಂತೋಷ್ ಕೃಷ್ಣ (35) ಬಂಧಿತರು. ಇನ್ನು ವಂಚಕರಿಗೆ ಬ್ಯಾಂಕ್ ಖಾತೆ ನೀಡಿದ ಆರೋಪದ ಮೇಲೆ ಮಂಗಳೂರಿನ ಇಬ್ರಾಹಿಂ (35) ನ್ನು ಅರೆಸ್ಟ್ ಮಾಡಲಾಗಿದೆ. ಪ್ರಕರಣದ ವಿವರ:ಮಂಗಳೂರು ನಗರದ…
-

ಶಾಲಾ ಮಕ್ಕಳ ಕಿಡ್ನ್ಯಾಪ್ ಆಡಿಯೋ ವೈರಲ್; ಮಂಗಳೂರು ಕಮಿಷನರ್ ಸ್ಪಷ್ಟನೆ
ಮಂಗಳೂರು: ಕುಂಟಿಕಾನ ಬಳಿ ಶಾಲಾ ಮಕ್ಕಳನ್ನು ಅಪಹರಿಸಲಾಗಿದೆ ಎಂದು ವಾಟ್ಸ್ ಅಪ್ ಸಂದೇಶ ವೈರಲ್ ಆಗಿದ್ದು ಮಂಗಳೂರು ನಗರಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಮಕ್ಕಳನ್ನು ಅಪಹರಿಸಲಾಗಿದೆ ಎಂದು ಹೇಳುವ ಧ್ವನಿ ಸಂದೇಶವು ಪ್ರಸ್ತುತ ವಾಟ್ಸಾಪ್ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವದಂತಿಗಳನ್ನು ಪರಿಶೀಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಈ ವರೆಗೆ ಎಲ್ಲಿಯೂ ಕಾಣೆಯಾದ ದೂರು ಬಂದಿಲ್ಲ. ಧ್ವನಿ ಹಂಚಿಕೊಳ್ಳಲಾಗುತ್ತಿದ್ದ ಮಹಿಳೆಯೊಂದಿಗೆ ಮಾತನಾಡಲಾಗಿದೆ.…
-

ಮಂಗಳೂರು: ಪತ್ನಿಯ ಮಾಲೀಕತ್ವದ 3 ವಾಹನ ಪೋರ್ಜರಿ ಸಹಿ ಹಾಕಿ ವರ್ಗಾಯಿಸಿದ ಪತಿ.!!
ಮಂಗಳೂರು: ಹೆಂಡತಿಯ ಮಾಲೀಕತ್ವದಲ್ಲಿದ್ದ ಮೂರು ಘನ ವಾಹನಗಳನ್ನು ಪೋರ್ಜರಿ ಸಹಿ ಹಾಕಿ ಗಂಡ ತನ್ನ ಅಪ್ರಾಪ್ತ ಮಗಳ ಹೆಸರಿಗೆ ವರ್ಗಾಯಿಸಿ ಮೋಸ ಮಾಡಿ ವಂಚಿಸಿರುವ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎಮ್.ಎಸ್.ಇ.ಝಡ್ ಕಾಲೊನಿ ರಾಮ ನಗರದ ನಿವಾಸಿ ಭವ್ಯ ಶೆಟ್ಟಿ ದೂರು ನೀಡಿರುವ ಮಹಿಳೆಯಾಗಿದ್ದು, ತನ್ನ ಗಂಡ ದಾಮೋದರ ಶೆಟ್ಟಿ ವಂಚನೆ ಮಾಡಿರುವುದಾಗಿ ದೂರು ನೀಡಿದ್ದಾರೆ. ಈಕೆಯ ಗಂಡ ದಾಮೋದರ ಶೆಟ್ಟಿ ಪ್ರತಿಷ್ಠಿತ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್…
-

ಮಂಗಳೂರು : ವೆಕ್ಸನ್- ಬಿಎಂಪಿ ನೆಟ್ವರ್ಕಿಂಗ್ ಸಂಸ್ಥೆಯಿಂದ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಹಣ ವಂಚನೆ!!
ಮಂಗಳೂರು : ಮಂಗಳೂರಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಹಣ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕುದ್ರೋಳಿಯ ಅಳಕೆ ಭಾಗದ ಶ್ರೇಯಾ ಸ್ವೀಟ್ಸ್ ಎದುರಿಗಿನ ಕಟ್ಟಡದಲ್ಲಿ ಮೊಕ್ಕಾಂ ಹೂಡಿರುವ ಮಹಾರಾಷ್ಟ್ರ ಮೂಲದ ‘ವೆಕ್ಸನ್’ ಹಾಗೂ ಬಿಎಂಪಿ ಎಂಬ ಹೆಸರಿನ ನೆಟ್ವರ್ಕಿಂಗ್ ಸಂಸ್ಥೆಯು ಇಂಟರರ್ನ್ಶಿಪ್ ಹೆಸರಿನಲ್ಲಿ ನೂರಾರು ಅಮಾಯಕ ವಿದ್ಯಾರ್ಥಿಗಳನ್ನು ಬಲೆಗೆ ಬೀಳಿಸಿಕೊಂಡು ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸ್ವಸ್ತಿಕ ಕಾಲೇಜಿನ ವಿದ್ಯಾರ್ಥಿಗಳು ಪತ್ರಿಕಾಗೋಷ್ಠಿ ನಡೆಸಿ ಕಂಪೆನಿ ವಿರುದ್ಧ ಗಂಭೀರವಾದ ಆರೋಪ…
-

ಮಂಗಳೂರು : ಲಾರಿ ಡಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು
ಮಂಗಳೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು,…
-

ಮಂಗಳೂರು: ನಗರದ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ..!!
ಮಂಗಳೂರು: ನಗರದ ಬಿಜೈ ಪ್ರದೇಶದಲ್ಲಿರುವ ಪ್ರತಿಷ್ಠಿತ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ಮಾಹಿತಿ ಪಡೆದ ಕದ್ರಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಂಗಳೂರಿನ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದಿದ್ದರೂ, ಪರಿಶೀಲನೆ ಬಳಿಕ ಅದು ಹುಸಿ…
-

ವಿಟ್ಲ: ಲೈಸನ್ಸ್ ಇಲ್ಲದೆ ಕೇರಳದಿಂದ ಕೆಂಪು ಕಲ್ಲುಗಳ ಸಾಗಾಟ- ಚಾಲಕರ ಸಮೇತ ಲಾರಿಗಳು ಪೊಲೀಸರ ವಶಕ್ಕೆ
ವಿಟ್ಲ: ಲೈಸನ್ಸ್ ಇಲ್ಲದೆ ಕೇರಳದಿಂದ ಕೆಂಪು ಕಲ್ಲುಗಳ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೆರುವಾಯಿ ಮಾರ್ಗವಾಗಿ ಕೇರಳದಿಂದ ಲಾರಿಗಳ ಮೂಲಕ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಬಂಟ್ವಾಳ ಬೆರಿಪದವು ಪ್ರದೇಶದಲ್ಲಿ ಕಲ್ಲಿನ ಲೋಡ್ ತುಂಬಿದ್ದ ಲಾರಿಗಳನ್ನು ಪರಿಶೀಲನೆ ನಡೆಸಿ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕರಾದ ವಿಟ್ಲದ ಸಾಧಿಕ್ ಮತ್ತು ಮೊಹಮ್ಮದ್ ಅವರನ್ನು ವಿಚಾರಣೆ ನಡೆಸಲಾಗಿದ್ದು, ಕೇರಳದ ಧರ್ಮತ್ತಡ್ಕದಿಂದ ಕಲ್ಲುಗಳನ್ನು ತುಂಬಿ ವೇಣು ಎಂಬವರು…
-

ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತ್ನ ಪಿಡಿಓ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ನಂಜುಂಡಮ್ಮ ಎಂದು ತಿಳಿದು ಬಂದಿದೆ. ಸರಸ್ವತಿಪುರದ ತಿಮ್ಮಶೆಟ್ಟಿ ಎಂಬವರಿಂದ ಸೈಟ್ಗೆ ದೃಢೀಕರಣ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಗ್ರಾಮ ಪಂಚಾಯತ್ ಕಚೇರಿಯಲ್ಲೇ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಹಿಡಿದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಯನ್ನು ವಶಕ್ಕೆ…
-

ಮಂಗಳೂರು: ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ 41 ಲಕ್ಷ ವಸೂಲಿ
ಮಂಗಳೂರು : ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 41 ಲಕ್ಷಹಣವನ್ನು ವಸೂಲಿ ಮಾಡಿದ ಘಟನೆ ನಡೆದಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ಸಂತ್ರಸ್ತ ವ್ಯಕ್ತಿಗೆ ದಿನಾಂಕ 31-01-2026 ರಂದು ಯಾರೋ ಅಪರಿಚಿತ ವ್ಯಕ್ತಿ ದೆಹಲಿಯಿಂದ 8796142545 ಈ ನಂಬರ್ ನಿಂದ ಕರೆ ಮಾಡಿ ಮುಂಬೈ ಸಿಸಿಬಿ ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದಾರೆ. ವೇಳೆ ವ್ಯಕ್ತಿಗೆ ನಿಮ್ಮ ಗುರುತಿನ ಚೀಟಿ ಬಳಸಿಕೊಂಡು ಮುಂಬೈನಲ್ಲಿ ಕೆನರಾ ಬ್ಯಾಂಕ್ ನಲ್ಲಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











