Category: ಕರಾವಳಿ
-

ಮಂಗಳೂರು: ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಆದರೆ ತೀವ್ರ ತಪಾಸಣೆಯ ಬಳಿಕ ಇದೊಂದು ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ. ಎಂದಿನಂತೆ ಸೋಮವಾರ ಕೋರ್ಟ್ ಕಲಾಪಗಳು ಆರಂಭವಾಗಿತ್ತು. ಮಧ್ಯಾಹ್ನದ ವೇಳೆ ಇ-ಮೇಲ್ ಬಂದಿರುವುದು ತಿಳಿಯಿತು ಎನ್ನಲಾಗಿದೆ. ಆರ್ಡಿಎಕ್ಸ್, ಐಇಡಿ ಸ್ಫೋಟಕಗಳನ್ನು ಬಳಸಿ ನ್ಯಾಯಾಲಯ ಸಂಕೀರ್ಣ ಕಟ್ಟಡವನ್ನು ಸ್ಫೋಟಗೊಳಿಸುವುದಾಗಿ ಇ-ಮೇಲ್ನಲ್ಲಿ ವ ಬೆದರಿಕೆ ಹಾಕಲಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಹಾಗೇ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳವು…
-

ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್
ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿ 1ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಈ ಒಂದು ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ.ಅಪರಾಧಿಗಳಾದ ಶರಣಬಸವರಾಜ್ ಮಲ್ಲ ಹಾಗೂ ಚರಣ್ ಎನ್ನುವ ಮೂವರು ಆರೋಪಿಗಳಿಗೆ ಇದೀಗ ಗಂಗಾವತಿ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಪ್ರಕರಣ…
-

ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು!
ಬಂಟ್ವಾಳ: ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ ಎನ್ನಲಾಗಿದೆ. ಮಂಗಳೂರು ನಿವಾಸಿ, ವಿಶಾಲಾಕ್ಷಿ (45) ಮೃತಪಟ್ಟ ಮಹಿಳೆ. ಮಂಗಳೂರು ಕಡೆಯಿಂದ ಬರುತ್ತಿರುವ ವೇಳೆ ಕಡೆಗೋಳಿ ಜಂಕ್ಷನ್ ನಲ್ಲಿ ಬೈಕ್ ಸವಾರನೋರ್ವ ಎದುರುಗಡೆ ಕ್ರಾಸ್ ಆಗಿದ್ದು, ರಿಕ್ಷಾ ಬೈಕ್ ಗೆ ಡಿಕ್ಕಿಯಾಗಿ, ಬಳಿಕ ನಿಯಂತ್ರಣ ತಪ್ಪಿ ರಿಕ್ಷಾ ಎದುರುಭಾಗದಲ್ಲಿ ನಿಂತಿದ್ದ ಮತ್ತೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ರಿಕ್ಷಾದಲ್ಲಿ…
-

ಉಡುಪಿ : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ- ವಿದ್ಯಾರ್ಥಿ ಅರೆಸ್ಟ್..!!
ಉಡುಪಿ : ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಗಳಿಗೆ ಕಾರಣವಾದ ಆರೋಪದ ಮೇಲೆ ಮಣಿಪಾಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ವಿದ್ಯಾರ್ಥಿಯನ್ನು ಅಭಿಮನ್ಯು ನೇಗಿ ಎಂದು ಗುರುತಿಸಲಾಗಿದೆ.ಫೆಬ್ರವರಿ 14ರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ಸಾಲಾಗಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಈತ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೂ ಕಾರು ಢಿಕ್ಕಿಯಾಗಿದ್ದು, ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಶಿವಪ್ರಸಾದ್ (76) ಅವರ ತಲೆಗೆ…
-

ಹನಿಟ್ರ್ಯಾಪ್ ಸೇರಿದಂತೆ 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ
ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7 ಪ್ರಕರಣ, ಹೆಬ್ರಿ- 1, ಕಲಘಟಕಿ- 1, ಕೋಟ- 1 ಹಾಗೂ ಬೆಂಗಳೂರು ಚಂದ್ರ ಲೇ ಔಟ್-1 ರಂತೆ ಕಳ್ಳತನ, ಸುಲಿಗೆ, ಹನಿಟ್ರ್ಯಾಪ್ ಗಳಂತಹ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ನ್ಯಾಯಾಲಯವು ಈವರೆಗೆ 12 ಬಾರಿ ವಾರೆಂಟ್…
-

ಮಂಗಳೂರು: ವಿದೇಶದಲ್ಲೇ ಕುಳಿತು ಯುವತಿಯರಿಗೆ ಗಾಳ..! ಪತಿಯ ಪ್ರಣಯದಾಟಕ್ಕೆ ಬೆಚ್ಚಿಬಿದ್ದ ಪತ್ನಿ, ಪೊಲೀಸರಿಗೆ ದೂರು
ಮಂಗಳೂರು : ಮಂಗಳೂರಿನಲ್ಲಿ ಪತಿಯ ಪ್ರೀತಿ ಪ್ರೇಮ ಪ್ರಣಯದಾಟಕ್ಕೆ ಪತ್ನಿಯೊಬ್ಬಳು ರೋಸಿ ಹೋಗಿದ್ದು ಪತಿಯ ವಿರುದ್ಧವೇ ಪತ್ನಿ ಇದಿ ದೂರು ಕೊಟ್ಟಿದ್ದಾಳೆ. ಮದುವೆ ಆಗಿದ್ದರೂ ಕೂಡ ಪತಿ ಬೇರೆ ಯುವತಿಯರ ಜೊತೆಗೆ ಪ್ರೀತಿ ಪ್ರೇಮ ನಾಟಕವಾಡುತ್ತಿದ್ದ. ವಿದೇಶದಲ್ಲಿಯ ಕುಳಿತು ಈತ ಯುವತಿಯರಿಗೆ ಗಾಳ ಹಾಕುತ್ತಾನೆ. ಕರಾವಳಿ ಮಂಗಳೂರು ಯುವತಿಯರೇ ಈತನ ನೇರ ಟಾರ್ಗೆಟ್ ಆಗಿದ್ದು, ಗಂಡನ ಪ್ರೇಮ, ಪ್ರೀತಿ ಪ್ರಣಯದಾಟಕ್ಕೆ ಪತ್ನಿ ಬೇಸತ್ತು ಹೋಗಿದ್ದಾಳೆ. ಮಂಗಳೂರಿನ ಬಜಪೆ ನಿವಾಸಿ ಮನಿಶ್ ವಿರುದ್ಧ ಪತ್ನಿ ಪ್ರೀತಿ ಇದೀಗ ದೂರು…
-

ಉಪ್ಪಿನಂಗಡಿ: ಯುಡಿಆರ್ ಪ್ರಕರಣ ಕೊಲೆ ಪ್ರಕರಣವಾಗಿ ಪರಿವರ್ತನೆ – ಮೂವರ ಬಂಧನ
ಉಪ್ಪಿನಂಗಡಿ: ಫೆ.09 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 07/2026, ಕಲಂ 194 (III)(IV) BNSS 2023 ಅಡಿ ದಾಖಲಾಗಿದ್ದ ಪ್ರಕರಣವು ಇದೀಗ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ. ಪ್ರಕರಣದಲ್ಲಿ ಕೆ.ಸಿ. ವರ್ಗೀಸ್ (73) ಎಂಬವರು ಮೃತಪಟ್ಟಿದ್ದು, ವೈದ್ಯಕೀಯ ವರದಿ ಪ್ರಕಾರ ತಲೆಗೆ ಉಂಟಾದ ಗಂಭೀರ ಹಲ್ಲೆ ಹಾಗೂ ದೇಹದ ಇತರ ಭಾಗಗಳಿಗೆ ಆಗಿರುವ ಗಾಯಗಳೇ ಸಾವಿಗೆ ಕಾರಣವೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ದಿನಾಂಕ ಫೆ.13 ರಂದು ಪ್ರಕರಣವನ್ನು ಅ.ಕ್ರ:21/2026 u/s 103(1) BNS-2023 ಅಡಿ ಕೊಲೆ ಪ್ರಕರಣವಾಗಿ…
-

ಬಂಟ್ವಾಳ: ಕಳೆದ ಕೆಲವು ದಿನಗಳಿಂದ ನೀರಿನ ಸಮಸ್ಯೆ..! ಪುರಸಭಾ ಕಛೇರಿಗೆ ಬೀಗ ಜಡಿದ ಗ್ರಾಮಸ್ಥರು
ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ಪುರಸಭಾ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಪ್ರಸಂಗ ಶುಕ್ರವಾರ ನಡೆದಿದೆ. ಪುರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಕಳೆದ ಕೆಲವು ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು ಜನರು ನೀರಿಗಾಗಿ ಪರದಾಡುವಂತಾಗಿತ್ತು. ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ದೂರು ನೀಡಿದ್ದರಾದರೂ ಯಾವುದೇ ರೀತಿಯ ಸ್ಪಂದನೆ ದೊರಕಿದೆ ಹಿನ್ನೆಲೆಯಲ್ಲಿ ಶುಕ್ರವಾರ ಕಛೇರಿಗೆ ಬೀಗ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಸಾರ್ವಜನಿಕರು…
-

ಮಂಗಳೂರಿನ ಹಳೆ ಬಂದರಿಗೆ GST ಬಿಲ್ ಇಲ್ಲದೇ ಗೋವಾದಿಂದ ಸ್ಕ್ರ್ಯಾಪ್..!! ಇದರಲ್ಲಿ ಇದೆಯೇ ಗೋಲ್ ಮಾಲ್?
ಮಂಗಳೂರಿನ ಹಳೆ ಬಂದರು ಪೋರ್ಟ್ ನಲ್ಲಿ ಯಾವುದೇ ಜಿ.ಎಸ್.ಟಿ ಬಿಲ್ ಗಳಿಲ್ಲದೇ ಗೋವಾ ದಿಂದ ಸ್ಕ್ರ್ಯಾಪ್ ಬರುತ್ತಿದೆ ಎಂದು ವರದಿಯಾಗಿದೆ.ಇಲ್ಲಿಗೆ ಇಷ್ಟೊಂದು ಗುಜರಿ ಹೇಗೆ ತರಿಸ್ತೀರಿ ಎಂದು ಅಲ್ಲಿನ ಅಧಿಕಾರಿ ಗಳನ್ನು ಕೇಳಿದರೆ ಮಂಗಳೂರಿನ ನ್ಯೂ ಬಂದರು ಪೋರ್ಟ್ ನಲ್ಲಿ ಸ್ಥಳ ಇಲ್ಲದ ಕಾರಣ ಇಲ್ಲಿಗೆ ಹಾಕಲು ನೋಟಿಸು ನೀಡಿರುತ್ತಾರೆ ಎಂದು ಬೇಜಾವ್ದಾರಿ ಕಾರಣ ಕೊಡುತ್ತಿದ್ದಾರೆ.ಆದರೆ ಇದಕ್ಕೆ ಯಾವುದೇ ಪಾವತಿ ಮೊತ್ತದ ಬಿಲ್ ಗಳು ಇಲ್ಲದೇ ಇಷ್ಟೊಂದು ಟನ್ ಐಟಂ ಗಳು ಬರಲು ಹೇಗೆ ಸಾಧ್ಯ ಎಂಬುದು…
-

ಮಂಗಳೂರು: ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್ಗಳ ಬಂಧನ
ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು:ಮುಸ್ತಫಾ ಸೀದಿಯಬ್ಬ (34) ಮೈಯದ್ದಿ (28) ಮೊಹಮ್ಮದ್ ಶಿಫಾನ್ (28) ಘಟನೆಯ ವಿವರ: ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸ್ವಿಫ್ಟ್ ಕಾರಿನಲ್ಲಿ ತಂದು, ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











