Category: ದೇಶ
-

ಸ್ಲೀಪರ್ ಬಸ್ ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ದೆಹಲಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸ್ಲೀಪರ್ ಬಸ್ ನಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ನಿಂದಲೇ ಈ ಒಂದು ಹೀನ ಕೃತ್ಯ ನಡೆದಿದ್ದು, ಆಗಸ್ಟ್ 4 ರಂದು ರಾತ್ರಿ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಪರಿಚೋಕ್ ನಲ್ಲಿ ಬಾಲಕಿಗೆ ಸ್ಲೀಪರ್ ಬಸ್…
-

ಮಸಾಲೆಗಳಲ್ಲಿ ಕ್ಯಾನ್ಸರ್ಕಾರಕ ಇಟಿಒ ಬಳಕೆ ನಿಷೇಧಕ್ಕೆ ರಾಜ್ಯದ ಆಗ್ರಹ; ಕೇಂದ್ರದಿಂದ ತಜ್ಞರ ಸಮಿತಿ ರಚನೆ
ನವದೆಹಲಿ: ರಾಜ್ಯಾದ್ಯಂತ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಮಾರುಕಟ್ಟೆಗಳ ಮೇಲೆ ಕರ್ನಾಟಕದ ಆರೋಗ್ಯ ಇಲಾಖೆ ಆಹಾರ ಸುರಕ್ಷತಾ ತಪಾಸಣೆ ನಡೆಸುತ್ತಿದೆ. ಈ ವೇಳೆ ಪ್ಯಾಕ್ ಮಾಡಲಾದ ಹಲವು ಮಸಾಲೆ ಪದಾರ್ಥಗಳಲ್ಲಿ ಇಟಿಒ ಪತ್ತೆಯಾಗಿದೆ. ಹೀಗಾಗಿ ದೇಶಿ ಮಾರುಕಟ್ಟೆಯಲ್ಲಿ ಇಟಿಒ ಬಳಕೆಗೆ ಸಂಪೂರ್ಣ ನಿಷೇಧ ಅಥವಾ ಕಠಿಣ ನಿಯಮಾವಳಿ ರೂಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ರಾಜ್ಯಾದ್ಯಂತ ಹೋಟೆಲ್ಗಳು, ರೆಸ್ಟೋರೆಂಟ್ಗಳು ಹಾಗೂ ಮಾರುಕಟ್ಟೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಆಹಾರ…
-

ಸರ್ಕಾರಿ ಬಸ್ ಚಾಲಕನ ಮನೆಯಲ್ಲಿ 15 ಕೆಜಿ ಚಿನ್ನ, 20 ಕೋಟಿ ನಗದು- ತನಿಖಾಧಿಕಾರಿಗಳೇ ಶಾಕ್
ಕೇವಲ ಒಬ್ಬ ಸಾಮಾನ್ಯ ಬಸ್ ಚಾಲಕನ ಮನೆಯಲ್ಲಿ ಸಿಕ್ಕ ಸಂಪತ್ತು ಕಂಡು ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ. ಪೊಲೀಸರು ಈ ಬೃಹತ್ ಪ್ರಮಾಣದ ಕಪ್ಪು ಹಣ ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲು 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳು, 5 ನೋಟು ಎಣಿಕೆ ಯಂತ್ರಗಳು ಹಾಗೂ ಹಲವು ಗಂಟೆಗಳ ಕಾಲ ಶ್ರಮಿಸಬೇಕಾಯಿತು. 35 ಚೀಲಗಳಲ್ಲಿ ಸಿಕ್ಕಿತು 20 ಕೋಟಿ ಕ್ಯಾಶ್, 15 ಕೆಜಿ ಬಂಗಾರ! ವರದಿಯ ಪ್ರಕಾರ, ಕೋಲ್ಕತ್ತಾ ಕಲ್ಲು ವ್ಯಾಪಾರಿ ಟುಲು ಮಂಡಲ್ ಅವರ ಭಾವ (ಪತ್ನಿಯ ಸಹೋದರ) ಹಾಗೂ…
-

ಸರ್ಕಾರಿ ವಾಹನಗಳ ದುರುಪಯೋಗಕ್ಕೆ ಬ್ರೇಕ್ : ಒಬ್ಬ ಅಧಿಕಾರಿಗೆ ಒಂದೇ ಕಾರು ನಿಯಮ ಜಾರಿ
ಸರ್ಕಾರಿ ವಾಹನಗಳ ದುರುಪಯೋಗ ತಡೆಯಲು ಮತ್ತು ಅನಗತ್ಯ ವೆಚ್ಚಕ್ಕೆ ಕಡಿತಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹಿರಿಯ ಅಧಿಕಾರಿಗಳಿಗೆ ಇನ್ಮುಂದೆ ‘ಒಬ್ಬ ಅಧಿಕಾರಿಗೆ ಒಂದೇ ಸರ್ಕಾರಿ ಕಾರು’ (One Officer, One Official Car) ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಬರುವ ವೆಚ್ಚ ಇಲಾಖೆ (Department of Expenditure) ಈ ಕುರಿತು ಅಧಿಕೃತ ಜ್ಞಾಪನಾ ಪತ್ರ (Office Memorandum) ಹೊರಡಿಸಿದ್ದು, ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೂತನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ…
-

ನೀಟ್ ಪ್ರತಿಭಟನೆ, ಬಂಧಿತ 18 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿಗಳನ್ನು ತಕ್ಷಣ ಬಿಡುಗಡೆಗೊಳಿಸಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ
ನವದೆಹಲಿ: ನೀಟ್ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್ ಸೇರಿ ರಾಜ್ಯದೆಲ್ಲೆಡೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸುಪ್ರೀಂ ವಿದ್ಯಾರ್ಥಿಗಳನ್ನು ದಂಡನಾತ್ಮಕ ಕ್ರಮದಿಂದ ರಕ್ಷಿಸಿದೆ. ಮಂಗಳವಾರ, ಸುಪ್ರೀಂ ಕೋರ್ಟ್ ಕ್ರಿಮಿನಲ್ ದಾಖಲೆಗಳಿಲ್ಲದವರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಕಾಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅತ್ಯಂತ…
-

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ಪತ್ರದಲ್ಲಿ ಯುವ ಸಾಥಿಗಳನ್ನು ಉದ್ದೇಶಿಸಿ ಬರೆದಿರುವ ಅವರು, ಕಳೆದ 4 ದಶಕಗಳಿಂದಲೂ (40 ವರ್ಷಗಳು) ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಬಲವಾದ,…
-

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಎನ್ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯೊಳಗೆ ಪ್ರಮುಖ ಬದಲಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಎನ್ಟಿಎ 47 ತನ್ನ ಅಧಿಕಾರಿಗಳನ್ನು ವಜಾಗೊಳಿಸಿದೆ. ಈ ಅಧಿಕಾರಿಗಳಲ್ಲಿ ಕೆಲವರ ವಿರುದ್ಧ ಕಾನೂನು ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಸುಧಾರಣಾ ಕ್ರಮಗಳನ್ನು ಅನುಸರಿಸಲಾಗುವುದು. ಮುಂದಿನ ತಿಂಗಳೊಳಗೆ NTA ಪುನರ್ ರಚನೆಗೆ ಒಳಗಾಗುವ ನಿರೀಕ್ಷೆಯಿದೆ.
-

AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!
ಸೂರತ್ : ನೀವು ನಿಮ್ಮ ಮೊಬೈಲ್ನಲ್ಲಿ ಬಳಸುತ್ತಿರುವುದು ಅಸಲಿ ಬ್ಯಾಂಕಿಂಗ್ ಆ್ಯಪ್ ಗಳೇ? ಒಮ್ಮೆ ತಪಾಸಣೆ ಮಾಡಿಕೊಳ್ಳಿ! ಕೃತಕ ಬುದ್ಧಿಮತ್ತೆ (AI) ಮತ್ತು ಟೆಲಿಗ್ರಾಂ ಬಳಸಿ ಬರೋಬ್ಬರಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ಗಳನ್ನು ತಯಾರಿಸಿ, ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ 17 ವರ್ಷದ ಯುವಕನನ್ನು ಸೂರತ್ ಸೈಬರ್ ಕ್ರೈಮ್ ಪೋಲಿಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದ 11ನೇ ತರಗತಿ ಡ್ರಾಪೌಟ್ ವಿದ್ಯಾರ್ಥಿ ರೋಹಿತ್ ವೀರೇಂದ್ರಸಿಂಗ್ ಶಾಕ್ಯ ಬಂಧಿತ ಆರೋಪಿ. ಈತ ತಯಾರಿಸಿದ ನಕಲಿ ಆ್ಯಪ್…
-

CJP ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್ : ದೆಹಲಿಯ ಹಲವೆಡೆ ಮೊಬೈಲ್ ಇಂಟರ್ನೆಟ್ ಸ್ಥಗಿತ
ನವದೆಹಲಿ: ಶಿಕ್ಷಣ ಮತ್ತು ಯುವ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೋಮವಾರ ಹಮ್ಮಿಕೊಂಡಿದ್ದ ‘ಚಲೋ ಸಂಸದ್’ ಪಾದಯಾತ್ರೆಯು ಜಂತರ್ ಮಂತರ್ ಬಳಿ ತೀವ್ರ ಉದ್ವಿಗ್ನತೆಗೆ ಕಾರಣವಾಯಿತು. ನೂರಾರು ವಿದ್ಯಾರ್ಥಿಗಳು ಮತ್ತು ಯುವ ಕಾರ್ಯಕರ್ತರು ಸಂಸತ್ತಿನತ್ತ ಮುನ್ನಡೆಯಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ಕೇರಳ…
-

1 ಲಕ್ಷ ಹಣದಾಸೆಗೆ ನವಜಾತ ಗಂಡು ಮಗುವನ್ನು ಮಾರಿದ ಪೋಷಕರು – ಆಶಾ ಕಾರ್ಯಕರ್ತೆಯರಿಂದ ಬಯಲಾಯ್ತು ಕೃತ್ಯ
ಹೈದರಾಬಾದ್: ಹಣದ ಆಸೆಗೆ ಹೆತ್ತವರೇ ತಮ್ಮ ನವಜಾತ ಗಂಡು ಮಗುವನ್ನು 1 ಲಕ್ಷ ರೂ.ಗೆ ಮಾರಾಟ ಮಾಡಿದ ಮನಕಲಕುವ ಘಟನೆ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಬೂಬ್ನಗರ ಗ್ರಾಮೀಣ ಮಂಡಲದ ತೆಲುಗುಗುಡೆಂ ಗ್ರಾಮದಲ್ಲಿ ಘಟನೆ ನಡೆದಿದೆ. ಕೇಶವುಲು ಮತ್ತು ನೀಲಮ್ಮ ಎಂಬ ದಂಪತಿ ದಿನಗೂಲಿ ಕಾರ್ಮಿಕರಾಗಿದ್ದು, ಅವರಿಗೆ ಈಗಾಗಲೇ ಒಬ್ಬಳು ಮಗಳು ಮತ್ತು ಇಬ್ಬರು ಗಂಡು ಮಕ್ಕಳು ಇದ್ದಾರೆ. ಕಳೆದ ಜೂನ್ 16ರಂದು ಮಹಬೂಬ್ನಗರ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನೀಲಮ್ಮ ಆರೋಗ್ಯವಂತ ಗಂಡು ಮಗುವಿಗೆ ಜನ್ಮ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











