Category: ದೇಶ
-

ಇನ್ಮುಂದೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರಿಗೆ ಬಿಗ್ ಶಾಕ್: 1 ವರ್ಷ ಜೈಲು ಶಿಕ್ಷೆ ಫಿಕ್ಸ್!
ಸಾಮಾಜಿಕ ಜಾಲತಾಣಗಳಲ್ಲಿ (Social Media) ಅಶ್ಲೀಲ ಹಾಗೂ ಅವಹೇಳನಕಾರಿ ಕಮೆಂಟ್ಗಳನ್ನು ಮಾಡುವವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದ್ದು, ‘ಕಮೆಂಟ್ ಶೂರರಿಗೆ’ ಬಿಸಿ ಮುಟ್ಟಿಸಲು ನೂತನ ಕಾಯ್ದೆಯೊಂದನ್ನು ಜಾರಿಗೆ ತರಲಾಗಿದೆ. 2024ರ ಜುಲೈ 1ರಿಂದ ಜಾರಿಗೆ ಬಂದಿರುವ ನೂತನ ಐಟಿ ಕಾಯ್ದೆಗಳನ್ವಯ (IT Act), ಇನ್ಮುಂದೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿ ಸಿಕ್ಕಿಬಿದ್ದರೆ ಕಠಿಣ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ. ಈ ಹೊಸ ನಿಯಮದ ಪ್ರಕಾರ, ಸಾಮಾಜಿಕ ಜಾಲತಾಣಗಳಲ್ಲಿ…
-

ರಾಮ ಮಂದಿರ ನಿಧಿ ದುರ್ಬಳಕೆ ಆರೋಪ: ಇಂದು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ
ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಹಣದ ಅಕ್ರಮ ದುರುಪಯೋಗದ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ಮಹತ್ವದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 13 ರ ಸೋಮವಾರದಂದು ಕೈಗೆತ್ತಿಕೊಳ್ಳಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ವಿಶೇಷ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆ ನಡೆಸಲಿದ್ದು, ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ…
-

ಕರ್ನಾಟಕ ಸೇರಿ ದೇಶಾದ್ಯಂತ ವಿವಿಧೆಡೆ NIA ಅಧಿಕಾರಿಗಳು ದಾಳಿ..!!
ದೇಶದ ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಬುಧವಾರ ಮಹತ್ವದ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕದ ಗಣಿ ನಾಡು ಬಳ್ಳಾರಿಯಲ್ಲಿಯೂ ಮುಂಜಾನೆಯೇ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ, ತೀವ್ರ ಶೋಧ ಕಾರ್ಯದಲ್ಲಿ ತೊಡಗಿದೆ. ದೇಶಾದ್ಯಂತ ಪ್ರಮುಖ ನಗರಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಹಾಗೂ ಸಾರ್ವಜನಿಕರಲ್ಲಿ ಭೀತಿ ಮೂಡಿಸಲು ಉಗ್ರ ಸಂಘಟನೆಗಳ ಬೆಂಬಲದೊಂದಿಗೆ ಸಂಚು ರೂಪಿಸಲಾಗಿತ್ತು…
-

ವಯನಾಡಿನಲ್ಲಿ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ- 30 ಮಂದಿ ನಾಪತ್ತೆ
ಕೇರಳ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದ್ದು, ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ…
-

ಮೂರು ವರ್ಷದ ಮಗುವಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ 65 ವರ್ಷದ ವೃದ್ಧನಿಗೆ ಮರಣದಂಡನೆ ಶಿಕ್ಷೆ!
ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೇವಲ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ನಡೆದಿದ್ದ ಅತ್ಯಂತ ಕ್ರೂರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವು ಸೋಮವಾರ ಮಹತ್ವದ ತೀರ್ಪು ನೀಡಿದೆ. ಘಟನೆ ನಡೆದ ಕೇವಲ ಎರಡು ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು, ಈ ಕೃತ್ಯವು “ಅಪರೂಪದಲ್ಲೇ ಅಪರೂಪದ” (Rarest of the rare) ವರ್ಗಕ್ಕೆ ಸೇರುತ್ತದೆ ಎಂದು ಅಭಿಪ್ರಾಯಪಟ್ಟು 65 ವರ್ಷದ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.…
-

ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚಲು ಯತ್ನಿಸಿದ ಸಂಚು ಭೇದಿಸಿದ ಪೊಲೀಸರು
ಮುಂಬೈ: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಜನರಿಗೆ ವಿಷದ ಮಾತ್ರೆಗಳನ್ನು ಹಂಚಿಕೆ ಮಾಡುವ ಮೂಲಕ ಅನಾಹುತ ಸೃಷ್ಟಿಸಲು ಯತ್ನಿಸಿದ ದೊಡ್ಡ ಸಂಚೊಂದನ್ನು ಮುಂಬೈ ಪೊಲೀಸರು ಭೇದಿಸಿದ್ದಾರೆ. ಪೊಲೀಸರ ಗಸ್ತು ವೇಳೆ ಈ ಖತರ್ನಾಕ್ ಸಂಚು ಬಯಲಾಗಿದೆ. ಮುಂಬೈನ ಡೊಂಗ್ರಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪುಣೆಯ ಫಯಾಜ್ ಪ್ರೇಮ್ಜಿ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯು ನೋವು ನಿವಾರಕ ಮಾತ್ರೆಗಳು ಎಂದು ಹೇಳಿ, ವಾಸ್ತವದಲ್ಲಿ ಇಲಿ ಪಾಷಾಣ ಬೆರೆಸಿದ ಮಾತ್ರೆಗಳನ್ನು ಹಂಚುತ್ತಿದ್ದರು ಎಂದು ತಿಳಿದುಬಂದಿದೆ. ಆತನ ಬಳಿಯಿದ್ದ 14,900 ವಿಷ ಮಾತ್ರೆಗಳನ್ನು ಪೊಲೀಸರು…
-

ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ನೋ ಎಂಟ್ರಿ- ನೀಟ್ ಪರೀಕ್ಷೆಯಲ್ಲಿ ಕಠಿಣ ನಿಯಮ ಜಾರಿ
ಬೆಂಗಳೂರು: ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯುತ್ತಿದೆ. ಪೇಪರ್ ಲೀಕ್ ಕಾರಣದಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಭಾರಿ ಬಂದೋಬಸ್ತ್ ಮೂಲಕ ನಡೆಸಲಾಗುತ್ತಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮಗಳನ್ನು ಕಠಿಣಗೊಳಿಸಿದೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಮೂರು ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಜೀನ್ಸ್ ಪ್ಯಾಂಟ್ ಧರಿಸಿ ಬಂದು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೈಗೆ ಕಟ್ಟಲಾಗಿದ್ದ ಧಾರ್ಮಿಕ ಸಂಕೇತದ ದಾರವನ್ನು…
-

ಬೇಕಲ ಸಮೀಪ ಪಳ್ಳಿಕೆರೆ ಕಡಲತೀರದಲ್ಲಿ ದುರಂತ; ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ ಭಾನುವಾರ ಸಂಜೆ ಪ್ರವಾಸಕ್ಕೆ ಬಂದಿದ್ದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.ಮೃತಪಟ್ಟ ವಿದ್ಯಾರ್ಥಿಗಳನ್ನು ಕೊಟ್ಟಾಯಂ ಜಿಲ್ಲೆಯ ಚಂಗನಾಶೇರಿಯ ನಿವಾಸಿಗಳಾದ ಅಂಕಿತ್ (20) ಮತ್ತು ಅಪ್ಪು ಟಿ. ಅಬ್ರಹಾಂ (20) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಸುಮಾರು 6:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಟ್ಟು ಆರು ಮಂದಿ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕಾಗಿ ಕಡಲತೀರಕ್ಕೆ ಆಗಮಿಸಿದ್ದು, ಅವರಲ್ಲಿ ನಾಲ್ವರು ಸಮುದ್ರಕ್ಕಿಳಿದಿದ್ದರು.ವಿದ್ಯಾರ್ಥಿಗಳು ಬೇಕಲ ಕೋಟೆಯನ್ನು ವೀಕ್ಷಿಸಲು ಬಂದಿದ್ದರು.…
-

2 ಲಕ್ಷಕ್ಕೆ ಬೇಡಿಕೆ, 40 ಸಾವಿರ ಪಡೆಯುವಾಗ ಟ್ರ್ಯಾಪ್! ಹೆಚ್ಎಎಲ್ ಪೊಲೀಸರ ವಿರುದ್ಧ ಎಸಿಬಿ ಆಕ್ಷನ್
ಬೆಂಗಳೂರು: ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಹೆಚ್ಎಎಲ್ ಪೊಲೀಸರು ಜೈಪುರದಲ್ಲಿ ಟ್ರ್ಯಾಪ್ ಆಗಿರುವ ಘಟನೆ ನಡೆದಿದೆ.ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರು, ಆತನ ಬಳಿ ಹಣಕ್ಕೆ ಬೇಡಿಕೆಯಿಟ್ಟು ರಾಜಸ್ಥಾನದ ಎಸಿಬಿ ಅಧಿಕಾರಿಗಳಿಗೆ ಲಾಕ್ ಆಗಿದ್ದಾರೆ.ಪಿಎಸ್ಐ ಅನಿತಾ, ಹೆಡ್ ಕಾನ್ಸ್ಟೇಬಲ್ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ್ಯಾಪ್ ಆದ ಪೊಲೀಸರು.ವರದಕ್ಷಿಣೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶುಕ್ರವಾರ ಆರೋಪಿ ಬಂಧನಕ್ಕೆ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಆರೋಪಿ ಬಳಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಆದ್ರೆ…
-

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಕೇರಳದ ಬ್ಯೂಟಿ ಕಂಟೆಸ್ಟೆಂಟ್ ಅರೆಸ್ಟ್
ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.ಮಾಡೆಲ್ ಹರ್ಷ ಸನ್ನಿ(28), ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಮೇತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.ಏರ್ ಇಂಟೆಲಿಜೆನ್ಸ್ ಯೂನಿಟ್ ಪ್ರಕಾರ, ಮಾಡೆಲ್ ಹರ್ಷ ಸನ್ನಿ ಜೂನ್ 10-11ರ ರಾತ್ರಿ ಬ್ಯಾಂಕಾಕ್ನಿಂದ ಏರ್ ಇಂಡಿಯಾ ವಿಮಾನ TG-351 ಮೂಲಕ ಮುಂಬೈನ ಶಿವಾಜಿ ಏರ್ಪೋರ್ಟ್ಗೆ ಬಂದಿಳಿದಿದ್ದರು. ಅನುಮಾನದ ಮೇಲೆ ಆಕೆಯನ್ನು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











