Category: ದೇಶ
-

ಟಿಸಿಎಸ್ ನಾಸಿಕ್ ಲೈಂಗಿಕ ಕಿರುಕುಳ, ಮತಾಂತರ ಪ್ರಕರಣ -ಟಾಟಾದಿಂದ ಉನ್ನತ ಮಟ್ಟದ ತನಿಖೆಗೆ ಆದೇಶ
ನವದೆಹಲಿ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯ ನಾಸಿಕ್ ಶಾಖೆಯಲ್ಲಿ ಕೇಳಿಬಂದಿರುವ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳು ಅತ್ಯಂತ ಗಂಭೀರವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಿಸಿಎಸ್ ಕಚೇರಿಯ ಎಂಟು ಮಹಿಳಾ ಉದ್ಯೋಗಿಗಳು ತಮ್ಮ ಸಹೋದ್ಯೋಗಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಿರುವ ಗಂಭೀರ ಆರೋಪಗಳನ್ನು ಮಾಡಿದ್ದರು. ಮದುವೆಯ ಭರವಸೆ ನೀಡಿ ದೈಹಿಕ…
-

ಭಾರತ ಸೇನೆಯ ಚಲನವಲನ ವೀಕ್ಷಿಸಲು ಸಿಸಿಟಿವಿ ಅಳವಡಿಸಿದ ಪಾಕ್- 11 ಮಂದಿಯ ಬಂಧನ
ನವದೆಹಲಿ: 4 ರಾಜ್ಯಗಳ ಹಲವು ನಗರಗಳ ಆಯಕಟ್ಟಿನ ಜಾಗದಲ್ಲಿ ಭಾರತದ ಸೇನೆಯ ಚಲನವಲನಗಳನ್ನು ವೀಕ್ಷಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಸಿಸಿಟಿವಿ ಅಳವಡಿಸಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ ಉಗ್ರ ಸಂಘಟನೆಯ ಸ್ಥಳೀಯ ಕಾರ್ಯಕರ್ತರನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿದ್ದ ಶಸ್ತ್ರಾಸ್ತ್ರ ಹಾಗೂ ಬೇಹುಗಾರಿಕಾ ಜಾಲವೊಂದನ್ನು ದೆಹಲಿ ಪೊಲೀಸರ ವಿಶೇಷ ಪಡೆ ಭೇದಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ಪಂಜಾಬ್, ರಾಜಸ್ಥಾನ, ಹರ್ಯಾಣ, ಕಾಶ್ಮೀರದ ಗಡಿಯಲ್ಲಿನ ಸೂಕ್ಷ ಮಿಲಿಟರಿ ನೆಲೆಗಳ ಸಮೀಪ ಸೋಲಾರ್…
-

ಗಮನಿಸಿ; ಟೋಲ್ಗಳಲ್ಲಿ ಏ.10ರಿಂದ ನಗದು ಸ್ವೀಕಾರ ಸಂಪೂರ್ಣ ಬಂದ್!
ನವದೆಹಲಿ : ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಎಚ್ಚರಿಕೆಯೊಂದನ್ನು ನೀಡಿದೆ. ಬರುವ ಏಪ್ರಿಲ್ 10, ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ಸ್ವೀಕಾರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಧರಿಸಿದೆ. ಹೆದ್ದಾರಿಗಳಲ್ಲಿ ಸುಗಮ ಸಂಚಾರ ಮತ್ತು ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯವನ್ನು ಶೂನ್ಯಕ್ಕೆ ಇಳಿಸುವ ಉದ್ದೇಶದಿಂದ ಈ ಕ್ರಾಂತಿಕಾರಿ ಡಿಜಿಟಲೀಕರಣದ ಕ್ರಮ ಕೈಗೊಳ್ಳಲಾಗಿದೆ. ಈ ಹೊಸ ನಿಯಮದ ಪ್ರಕಾರ,…
-

ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು!!
ಕಾರು ತೆರೆದ ಬಾವಿಗೆ ಬಿದ್ದು 6 ಮಕ್ಕಳ ಸಹಿತ 9 ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಶುಕ್ರವಾರ ರಾತ್ರಿ ಮಹಾರಾಷ್ಟ್ರದ ನಾಶಿಕ್ನಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ನಾಶಿಕ್ ಜಿಲ್ಲೆಯ ದಿಂಡೋರಿ ಪಟ್ಟಣದ ಶಿವಾಜಿ ನಗರದಲ್ಲಿ ಈ ದಾರುಣ ಅಪಘಾತ ಸಂಭವಿಸಿದೆ. ಔತಣಕೂಟದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಶಾಲವಾದ ತೆರೆದ ಬಾವಿಗೆ ಬಿದ್ದಿದೆ. ಮೃತರೆಲ್ಲ ಒಂದೇ ಕುಟುಂಬದ ಸದಸ್ಯರು ಎನ್ನಲಾಗಿದೆ. ಮಕ್ಕಳಲ್ಲಿ ಐವರು 14 ವರ್ಷ ಒಳಗಿನವರು ಹಾಗೂ ಓರ್ವ…
-

ಅವಳಿ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ಪಾಪಿ ತಂದೆ!
ತೆಲಂಗಾಣದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಅವಳಿ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಂದೆಯೇ ಹತ್ಯೆ ಮಾಡಿರುವ ಘಟನೆ ನಡೆದಿದೆ.ಹೌದು, ಹೆಣ್ಣು ಮಕ್ಕಳು ಹುಟ್ಟಿದರೆ ಮಹಾಲಕ್ಷ್ಮಿ ಮನೆಗೆ ಬಂದಳು ಎಂದು ಸಂಭ್ರಮಿಸುವ ಈ ಕಾಲದಲ್ಲಿ, ಕೇವಲ ಹೆಣ್ಣು ಮಕ್ಕಳೆಂಬ ಕಾರಣಕ್ಕೆ ಹೆತ್ತ ತಂದೆಯೇ ತನ್ನಿಬ್ಬರು ಅವಳಿ ಹೆಣ್ಣು ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿದ ಭೀಕರ ಘಟನೆ ತೆಲಂಗಾಣದ ಕರೀಮನಗರ ಜಿಲ್ಲೆಯ ಜೂಬ್ಲಿನಗರದಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ:ಜೂಬ್ಲಿನಗರದ ನಿವಾಸಿ, ಖಾಸಗಿ ಉದ್ಯೋಗಿಯಾಗಿರುವ ಕಚ್ಚು ಶ್ರೀಶೈಲಂ ಮತ್ತು ಮೌನಿಕಾ ದಂಪತಿಗೆ…
-

ಸೈಬರ್ ಕಿರುಕುಳಕ್ಕೆ ಬ್ರೇಕ್: ಅನಾಮಧೇಯ ದೂರುಗಳನ್ನೂ ನಿರ್ಲಕ್ಷಿಸಬೇಡಿ! ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ರಾಜ್ಯಗಳಿಗೆ ಕೇಂದ್ರದ ಕಟ್ಟುನಿಟ್ಟಿನ ಆದೇಶ
ಇಂಟರ್ನೆಟ್ ಲೋಕದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಆನ್ಲೈನ್ ದೂರು ನೀಡುವಾಗ ದೂರುದಾರರು ತಮ್ಮ ಗುರುತನ್ನು ಬಹಿರಂಗಪಡಿಸದಿದ್ದರೂ (Faceless Complaints), ಅಂತಹ ದೂರುಗಳ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚಿಸಿದೆ. ಸಮಾಜದ ಭಯ ಅಥವಾ ಮುಜುಗರದಿಂದಾಗಿ ಅನೇಕರು ತಮ್ಮ ಹೆಸರು ಹೇಳಿಕೊಳ್ಳಲು ಹಿಂಜರಿಯುತ್ತಾರೆ. ಇಂತಹ ‘ಅನಾಮಧೇಯ’ ದೂರುಗಳನ್ನು ಕೇವಲ ತಾಂತ್ರಿಕ ಕಾರಣಗಳಿಗಾಗಿ ವಜಾಗೊಳಿಸಬಾರದು…
-

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ
ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31) ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಚಲನರಹಿತವಾಗಿ ಏಮ್ಸ್ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼಎಂದು ಮನವಿ ಮಾಡಿಕೊಂಡಿದ್ದಾರೆ. ರಾಣಾ ಅವರ ಕುಟುಂಬವು ಅವರೊಂದಿಗೆ ತಮ್ಮ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವ 22 ಸೆಕೆಂಡ್ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ರಾಣಾ ಅವರ ತಾಯಿ ಪಕ್ಕದಲ್ಲಿ ಭಾವುಕರಾಗಿ ಕುಳಿತಿದ್ದರು. ಬ್ರಹ್ಮ ಕುಮಾರಿ ಸಹೋದರಿಯೊಬ್ಬರು ಅವರ ಹಣೆಯ ಮೇಲೆ…
-

ಮದುವೆ ನಿರಾಕರಿಸಿದ್ದಕ್ಕೆ ಹುಡುಗಿಗೆ ಬಲವಂತವಾಗಿ ಹೆಚ್ಐವಿ ರಕ್ತ ಇಂಜೆಕ್ಟ್ ಮಾಡಿದ ಪಾಪಿ!
ಮದುವೆ ನಿಶ್ಚಯವಾದ ನಂತರ ಮಗನಿಗೆ ಹೆಚ್ಐವಿ (HIV) ಇರುವುದು ತಿಳಿದು ಹುಡುಗಿಯ ಕಡೆಯವರು ಸಂಬಂಧ ನಿರಾಕರಿಸಿದ್ದಕ್ಕೆ, ಆಕ್ರೋಶಗೊಂಡ ಯುವಕನೊಬ್ಬ ತನ್ನದೇ ಹೆಚ್ಐವಿ ಪೀಡಿತ ರಕ್ತವನ್ನು ಯುವತಿಯ ದೇಹಕ್ಕೆ ಇಂಜೆಕ್ಷನ್ ಮೂಲಕ ಚುಚ್ಚಿದ ಅಮಾನವೀಯ ಘಟನೆ ಹೈದರಾಬಾದ್ನ ಪೋಚರಂನಲ್ಲಿ ನಡೆದಿದೆ. ಘಟನೆಯ ಭೀಕರ ವಿವರಗಳು:ಸಂಬಂಧ ಕ್ಯಾನ್ಸಲ್ ಆಗಿದ್ದೇಕೆ?: ಆರೋಪಿ ಮನೋಹರ್ (24) ಮತ್ತು ಸಂತ್ರಸ್ತ ಯುವತಿ ಸಂಬಂಧಿಕರಾಗಿದ್ದು, ಇವರಿಬ್ಬರಿಗೂ ಮದುವೆ ನಿಶ್ಚಯವಾಗಿತ್ತು. ಆದರೆ, ಮನೋಹರ್ ಪೋಷಕರು ಹೆಚ್ಐವಿಯಿಂದ ಮೃತಪಟ್ಟಿದ್ದರಿಂದ ಸಂಶಯಗೊಂಡ ಯುವತಿಯ ತಂದೆ, ಮನೋಹರ್ನನ್ನು ರಕ್ತ ಪರೀಕ್ಷೆಗೆ ಒಳಪಡಿಸಿದ್ದರು.…
-

ಟಿ20 ವಿಶ್ವಕಪ್ ಗೆಲುವಿನ ಸಂಭ್ರಮ: ಉದ್ಯೋಗಿಗಳಿಗೆ ತಲಾ ₹2,000 ಗಿಫ್ಟ್ ನೀಡಿದ ಕೇರಳ ಉದ್ಯಮಿ
ಕೇರಳ: ಭಾರತದ ಕ್ರಿಕೆಟ್ ತಂಡ ICC Men’s T20 World Cup ಗೆದ್ದ ಸಂಭ್ರಮ ದೇಶದಾದ್ಯಂತ ಅಭಿಮಾನಿಗಳಲ್ಲಿ ಭಾರೀ ಉತ್ಸಾಹ ಮೂಡಿಸಿದೆ. ಈ ಸಂತಸದ ಕ್ಷಣವನ್ನು ವಿಭಿನ್ನ ರೀತಿಯಲ್ಲಿ ಆಚರಿಸುತ್ತಿರುವ ಉದಾಹರಣೆಗಳ ನಡುವೆ ಕೇರಳದ ಉದ್ಯಮಿ ಒಬ್ಬರು ತಮ್ಮ ಸಂಸ್ಥೆಯ ಉದ್ಯೋಗಿಗಳಿಗೆ ತಲಾ ₹2,000 ನಗದು ಗಿಫ್ಟ್ ನೀಡಿ ಗಮನ ಸೆಳೆದಿದ್ದಾರೆ. ಕೇರಳದ ಕೋಟಾಯಂ ಜಿಲ್ಲೆಯ ಪಾಂಪಾಡಿ ಪ್ರದೇಶದ ಉದ್ಯಮಿ Nithin Babu ತಮ್ಮ ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಈ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಅವರ ಸಂಸ್ಥೆಯಲ್ಲಿ…
-

ಬೆಚ್ಚಿ ಬೀಳಿಸೋ ಕೃತ್ಯ: 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ ಆ್ಯಸಿಡ್ ದಾಳಿ !
ಶಾಲೆಯೊಂದರಲ್ಲಿ ಮೂರು ವರ್ಷದ ಹಸುಳೆಯ ಮೇಲೆ ಶಿಕ್ಷಕಿಯೇ ಆ್ಯಸಿಡ್ ದಾಳಿ ನಡೆಸಿರುವ ಅತ್ಯಂತ ದಾರುಣ ಹಾಗೂ ಅಮಾನವೀಯ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಫೆಬ್ರವರಿ 23 ರಂದು ಈ ಘಟನೆ ನಡೆದಿದ್ದು, ಪ್ರಾಂಶುಪಾಲರ ಬೆದರಿಕೆಯ ನಡುವೆಯೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ:ಫೆಬ್ರವರಿ 23ರಂದು ಬೆಳಿಗ್ಗೆ ತಾಯಿ ತನ್ನ 3 ವರ್ಷದ ಮಗುವನ್ನು ಎಂದಿನಂತೆ ಶಾಲೆಗೆ ಬಿಟ್ಟು ಬಂದಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಶಾಲೆ ಕಡೆಯಿಂದ ಕರೆ ಮಾಡಿದ ಶಿಕ್ಷಕಿ, “ನಿಮ್ಮ ಮಗು ಬಾತ್ರೂಮ್ನಲ್ಲಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











