Category: ರಾಜ್ಯ
-

ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ಉಪಲೋಕಾಯುಕ್ತರಿಂದ ಸುಮೋಟೋ ಕೇಸ್ ದಾಖಲು
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸ್ತುತ ಸಾಲಿನಲ್ಲಿ ವಿತರಿಸಲಾಗಿರುವ ಶೂಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂ ಪ್ರೇರಿತ (Suo-moto) ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿ ಎರಡು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರಾಜ್ಯದ ವಿವಿಧ ದಿನಪತ್ರಿಕೆಗಳಲ್ಲಿ ವರದಿಯಾದಂತೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ…
-

ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಭಟ್ಕಳದಲ್ಲಿ ಪತ್ತೆ..!!
ಕಳೆದ ಕೆಲವು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಸೊಸೈಟಿ) ಮುಖ್ಯ ನಿರ್ವಹಣಾಧಿಕಾರಿ (ಸಿಇಒ) ಮದನ್ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಘಟನೆಯ ವಿವರ: ತೀರ್ಥಹಳ್ಳಿಯ ನಿವಾಸಿಯಾಗಿದ್ದ ಮದನ್ ಅವರು ಶುಕ್ರವಾರದಂದು ಮನೆಯಿಂದ ಹೊರಟ ನಂತರ ಏಕಾಏಕಿ ನಾಪತ್ತೆಯಾಗಿದ್ದರು. ಬಳಿಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಂಬಳ್ಳಿ ಅರಣ್ಯ ಪ್ರದೇಶದಲ್ಲಿ ಅವರ ಮಾರುತಿ ಸ್ವಿಫ್ಟ್ ಕಾರು ಅನಾಥವಾಗಿ ಪತ್ತೆಯಾಗಿತ್ತು.…
-

ಲೇಡಿ ಡಾನ್ ಸುಲೋಚನಾ ನಿವಾಸಕ್ಕೆ ಪೊಲೀಸ್ ದಾಳಿ: 50ಕ್ಕೂ ಹೆಚ್ಚು ಆಸ್ತಿ ದಾಖಲೆಗಳು ಪತ್ತೆ
ಲೇಡಿ ಡಾನ್ ಎಂದೇ ಖ್ಯಾತರಾದ ಕೊನೇಟಿ ಸುಲೋಚನಾ ಅವರ ನಿವಾಸದಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಅಕ್ರಮ ಆಸ್ತಿಗಳನ್ನು ಪತ್ತೆಹಚ್ಚಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ರಾಜಕೀಯ ನಾಯಕರೊಂದಿಗಿನ ಸಂಪರ್ಕದ ಮೂಲಕ ಅವರು ಡಾನ್ ಸ್ಥಾನಮಾನಕ್ಕೆ ಏರಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಅವರ ವಿರುದ್ಧ ರೌಡಿ ಶೀಟ್ ತೆರೆಯಲಾಗಿತ್ತು. ಇತ್ತೀಚಿನ ಪ್ರಕರಣವೊಂದರಲ್ಲಿ, ನ್ಯಾಯಾಲಯದ ಆದೇಶದ ಪ್ರಕಾರ ಸುಲೋಚನಾ ಮತ್ತು ಅವರ ಸಹೋದರನ ನಿವಾಸದಲ್ಲಿ ಶೋಧ ನಡೆಸಲಾಯಿತು. ಈ ವೇಳೆ…
-

ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ಇಲ್ಲ- ಹೈರ್ಕೋಟ್
ಬೆಂಗಳೂರು: ಆರೋಪಿಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP)ಗೆ ಗಡಿಪಾರು ಆದೇಶ ಮಾಡುವುದಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಠಿಕಾರಿಗಳಿಗೆ ಈ ಅಧಿಕಾರ ನೀಡಿ ರಾಜ್ಯ ಸರ್ಕಾರ 2025ರ ನವೆಂಬರ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಡಿಪಾರು ಮಾಡಿದ್ದ ಆದೇಶವನ್ನು ಪ್ರಶ್ನಿಸಿ ಚಂದ್ರಕಾಂತ್ ಶಂಕರ್…
-

ಮನೆಯಲ್ಲೇ ರಾಜಾರೋಷವಾಗಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಸ್ಟಾಫ್ ನರ್ಸ್ ಅಮಾನತು!!
ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ, ಮನೆಯಲ್ಲಿ ರಾಜಾರೋಷವಾಗಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪಕ್ಕೆ ಒಳಗಾಗಿದ್ದ ಸ್ಟಾಫ್ ನರ್ಸ್ ವಿರುದ್ಧ ಆರೋಗ್ಯ ಇಲಾಖೆ ಶಿಸ್ತುಕ್ರಮ ಜರುಗಿಸಿದೆ. ಆರೋಪಿತ ಸಿಬ್ಬಂದಿ ಜಿ.ಬಿ. ಸುನಿತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶುಶ್ರೂಷಕಿ (ಸ್ಟಾಫ್ ನರ್ಸ್) ಜಿ.ಬಿ. ಸುನಿತಾ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿರುವ ತಮ್ಮ ಸ್ವಂತ ನಿವಾಸದಲ್ಲೇ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮವಾಗಿ…
-

ನಕಲಿ ಶಾಲೆಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಮಹತ್ವದ ಆದೇಶ
ಅಸ್ತಿತ್ವದಲ್ಲೇ ಇಲ್ಲದ ಆಡಳಿತ ಮಂಡಳಿಗಳ ಹೆಸರಿನಲ್ಲಿ ಅಕ್ರಮವಾಗಿ ಶಾಲೆಗಳನ್ನು ನಡೆಸುತ್ತಿರುವ ಹಾಗೂ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖಾ ವರದಿ ಮತ್ತು ಕೈಗೊಂಡ ಕ್ರಮಗಳ ವಿವರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಮುಂದಿನ ವಿಚಾರಣೆ ವೇಳೆಗೆ ಈ ಬಗ್ಗೆ ಸೂಕ್ತ ಮಾಹಿತಿ ಸಲ್ಲಿಸದಿದ್ದರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರು ನ್ಯಾಯಾಲಯದ ಮುಂದೆ ಖುದ್ದು ಹಾಜರಿರಬೇಕಾಗುತ್ತದೆ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ನಕಲಿ ಹೆಸರುಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಕುರಿತು ಬಂದ…
-

ಪೋಲಿಸ್ ಅಧಿಕಾರಿಗಳ ವಿರುದ್ಧ ಹಣ ವಂಚನೆ ಆರೋಪ : ಲೈವ್ ನಲ್ಲಿಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!
ಪೊಲೀಸ್ ಅಧಿಕಾರಿಗಳ ವಿರುದ್ಧ ಹಣ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೈವ್ ಮಾಡಿ ಹಾಸನದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ನನ್ನ ಸಾವಿಗೆ ಹುಣಸೂರು ಡಿವೈಎಸ್ಪಿ ರವೀಶ್, ಅಜಯ್, ಮನೋಹರ, ಪ್ರಸಾದ, ಮಂಜುನಾಥ್ ಕಾರಣ ಎಂದು ವಿಡಿಯೋ ಮಾಡಿದ್ದಾನೆ. ವಿಷ ಕುಡಿದು ಅಮರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಡುವಿನ ಹೊಸಹಳ್ಳಿ ನಿವಾಸಿ ಅಮರ್ ಎಂದು ತಿಳಿದುಬಂದಿದೆ. ಪಿರಿಯಾಪಟ್ಟಣದ ಬೆಟ್ಟದಪುರದ ಠಾಣೆಯ ಸಿಬ್ಬಂದಿ ವಿರುದ್ಧ ಈ ಒಂದು ಆರೋಪ ಮಾಡಿದ್ದು ಲೈವ್…
-

ಸಿಹಿ ತಿಂಡಿ ಘಟಕಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: 3 ಘಟಕಗಳು ಬಂದ್, ಕಳಪೆ ಆಹಾರ ಜಪ್ತಿ
ರಾಜ್ಯದಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯ ಮಾನದಂಡಗಳ ಕಟ್ಟುನಿಟ್ಟಿನ ಪಾಲನೆಗಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪ್ರಮುಖ ನಗರಗಳ ಸಿಹಿ ತಿಂಡಿ ತಯಾರಿಕಾ ಘಟಕಗಳ ಮೇಲೆ ಬೃಹತ್ ಜಂಟಿ ಕಾರ್ಯಾಚರಣೆ ನಡೆಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರ ನಿರ್ದೇಶನದಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ 2011ರ ನಿಯಮಾವಳಿಗಳ ಅನ್ವಯ ಈ ವಿಶೇಷ ತಪಾಸಣೆ ಕೈಗೊಳ್ಳಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ…
-

ಕೆಪಿಎಸ್ಸಿ ನೇಮಕಾತಿ ಹಗರಣ: ‘IAS’ ಅಧಿಕಾರಿ ಗ್ಯಾನೇಂದ್ರ ಕುಮಾರ ಅರೆಸ್ಟ್ ಬೆನ್ನಲ್ಲೇ ಮತ್ತೊಬ್ಬ ಪ್ರಮುಖ ಮಧ್ಯವರ್ತಿ ವಶಕ್ಕೆ
ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಅಧಿಕಾರಿಗಳು ತಮ್ಮ ತನಿಖೆಯನ್ನು ತೀವ್ರಗೊಳಿಸಿದ್ದು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ಬಂಧನದ ಬೆನ್ನಲ್ಲೇ ಇದೀಗ ಪ್ರಕರಣದಲ್ಲಿದ್ದ ಮತ್ತೊಬ್ಬ ಪ್ರಮುಖ ಮಧ್ಯವರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಐಎಎಸ್ ಅಧಿಕಾರಿಗೆ ಅಕ್ರಮ ಎಸಗಲು ನೇರವಾಗಿ ನೆರವು ನೀಡಿದ್ದ ಆರೋಪದ ಮೇಲೆ ಈ ಮಧ್ಯವರ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಸ್ತುತ ಆತನನ್ನು ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇದಕ್ಕೂ ಮುನ್ನ, ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ ಸುದೀರ್ಘ ವಿಚಾರಣೆಗೆ…
-

1352 ರೌಡಿಶೀಟರ್ಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರ ದಿಢೀರ್ ದಾಳಿ..!!
ಬೆಂಗಳೂರು : ನಗರದಲ್ಲಿ ಪುಂಡಾಟಿಕೆ ಮತ್ತು ಅಪರಾಧ ಕೃತ್ಯಗಳಿಗೆ ಕಟಿಬದ್ಧವಾಗಿ ಕಡಿವಾಣ ಹಾಕಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ನಗರದಾದ್ಯಂತ ಒಟ್ಟು 1,352 ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ಏಕಾಏಕಿ ದಿಢೀರ್ ದಾಳಿ ನಡೆಸಿದ್ದಾರೆ. ಸಿಸಿಬಿ (CCB) ತಂಡದ ಜೊತೆಗೆ ಬೆಂಗಳೂರು ಪಶ್ಚಿಮ, ಉತ್ತರ, ಈಶಾನ್ಯ ಹಾಗೂ ನೈರುತ್ಯ ವಿಭಾಗದ ಪೊಲೀಸರು ಜಂಟಿಯಾಗಿ ಈ ಬೃಹತ್ ಜಪ್ತಿ ಮತ್ತು ಪರಿಶೀಲನಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ತಡರಾತ್ರಿ ಹಾಗೂ ಮುಂಜಾನೆ 4 ಗಂಟೆಯಿಂದಲೇ ಆರಂಭವಾದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











