Category: ರಾಜ್ಯ
-

ನೇಮಕಾತಿಯಿಂದ ಪಿಎಚ್ಡಿ ತನಕ ಅಕ್ರಮಗಳ ಆರೋಪ: ಅಕ್ಕಮಹಾದೇವಿ ಮಹಿಳಾ ವಿವಿ ವಿವಾದದ ಕೇಂದ್ರಬಿಂದು
ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ’ದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳ ಸರಣಿ ಆರೋಪ ಕೇಳಿಬಂದಿವೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಪಿಎಚ್ಡಿ ಪದವಿ ಪ್ರದಾನ ವಿಚಾರದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ಲಂಚಕ್ಕೆ ಬೇಡಿಕೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ. ಇನ್ನು ಪಿಹೆಚ್ಡಿ ಪದವಿ ಪ್ರದಾನ ವಿಚಾರದಲ್ಲೂ ಭ್ರಷ್ಟಾಚಾರ, ಕಿರುಕುಳ ಆರೋಪ ಕೇಳಿಬಂದಿವೆ. ಸರ್ಕಾರದ ಹಾಗೂ ಮೀಸಲಾತಿ ನಿಯಮಾವಳಿಗಳಿಗೆ ಅನುಗುಣವಾಗಿ ಪಿಹೆಚ್.ಡಿ ಪ್ರವೇಶಾತಿಯನ್ನು ಲಿಖಿತ ಮತ್ತು ಮೌಖಿಕ ಪರೀಕ್ಷೆಗಳ…
-

ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸ್ಪೀಕರ್ ಯು.ಟಿ ಖಾದರ್ ಗೆ ಡಿಸಿಎಂ ಪಟ್ಟ?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆ ಪರ್ವ ಮುಗಿಯುತ್ತಿದ್ದಂತೆ, ಇದೀಗ ಎಲ್ಲರ ಕಣ್ಣು ನೂತನ ಸಚಿವ ಸಂಪುಟದ ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಕುರ್ಚಿ ಏರಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಯಾವ ರೀತಿಯ ಟೀಮ್ ನೀಡಲಿದೆ ಎಂಬ ಕುತೂಹಲ ತೀವ್ರಗೊಂಡಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಭಾರಿ ಸರ್ಜರಿಗೇ ಕೈಹಾಕಿದೆ. ವಿಶೇಷವಾಗಿ, ಹೊಸ ಸಂಪುಟದಲ್ಲಿ ಯುವಕರಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಟ್ಟು ಹಿಡಿದಿದ್ದಾರೆ.…
-

ಭೀಮಾತೀರದಲ್ಲಿ ಮತ್ತೆ ಗ್ಯಾಂಗ್ವಾರ್ ಭೀತಿ; ಒಂದೇ ಕುಟುಂಬದ 6 ಜನರ ಬರ್ಬರ ಕೊಲೆ
ವಿಜಯಪುರ : ದೀರ್ಘಕಾಲದ ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ನಡೆದ ಸಂಧಾನ ಸಭೆಯು ರಕ್ತಪಾತದಲ್ಲಿ ಅಂತ್ಯಗೊಂಡಿದ್ದು, ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಇಷ್ಟು ದಿನ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ಗ್ಯಾಂಗ್ವಾರ್ ಭೀತಿ ಶುರುವಾಗಿದ್ದು, ಗ್ರಾಮದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ…
-

ಜೈಲು ಉತ್ಪನ್ನ ಮಳಿಗೆ ತೆರೆಯುವ ವೇಳೆ ಬಯಲಾಯ್ತು ಕೋಟಿ ಮೌಲ್ಯದ ಜಾಗ ಕಬ್ಜಾ ಪ್ರಕರಣ
ಬೆಂಗಳೂರು: ಸುಮಾರು 40ರಿಂದ 50 ಕೋಟಿ ರೂ ಮೌಲ್ಯದ ಕಾರಾಗೃಹ ಇಲಾಖೆಯ ಕಟ್ಟಡದ ಮೇಲೆ ಖದೀಮರು ಕಣ್ಣು ಹಾಕಿದ್ದಾರೆ. ಸ್ವತ್ತು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀನದಲ್ಲಿರುವ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಮಾರ್ಜ್ ಪ್ರಿಸನರ್ಸ್ ಏಡ್ ಸೊಸೈಟಿಯ ಆಸ್ತಿಯನ್ನು ಕಬ್ಜ ಮಾಡಲಾಗಿದೆ. ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಾದ…
-

ರಾಜ್ಯಪಾಲರ ಕಾರ್ಯದರ್ಶಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಪ್ರಮುಖ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನ ರಾಜಭವನಕ್ಕೆ ಆಗಮಿಸಿದ ಅವರು, ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸುವ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದಾರೆ. ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ್ದರಿಂದ, ಸಿದ್ದರಾಮಯ್ಯ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ಈ ಮೂಲಕ ಕಳೆದ ಕೆಲವು ದಿನಗಳಿಂದ ರಾಜ್ಯ…
-

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮತ್ತು ಚರ್ಚೆಗಳಿಗೆ ಕಾರಣವಾಗಿದ್ದ ರಾಜಕೀಯ ಬೆಳವಣಿಗೆಗಳು ಇದೀಗ ಅಂತಿಮ ಹಂತಕ್ಕೆ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಚಿವರ ಮಹತ್ವದ ‘ಬ್ರೇಕ್ ಫಾಸ್ಟ್’ (ಉಪಾಹಾರ) ಸಭೆಯಲ್ಲಿ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ…
-

ಮಾಜಿ ರೌಡಿಶೀಟರ್ಗೆ ಆಶೀರ್ವಾದ?: ಮಹಿಳಾ ಆಯೋಗದ ಅಧ್ಯಕ್ಷೆ ಮತ್ತೆ ವಿವಾದದಲ್ಲಿ
ಉಡುಪಿ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಒಬ್ಬರಿಗೆ ಕಾರಿನಲ್ಲೇ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲೆಯ ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ…
-

ಕರಾವಳಿಯನ್ನೇ ಬೆಚ್ಚಿಬೀಳಿಸಿದ ಭೀಕರ ಪೋಕ್ಸೋ ಪ್ರಕರಣ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ – ಇಬ್ಬರು ಕಾಮುಕರ ಬಂಧನ
ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್ಗೆ ಕರೆದೊಯ್ದು ಸರಣಿ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ವಂಚಿಸಿರುವ ಅತ್ಯಂತ ಗಂಭೀರ ಹಾಗೂ ಪೈಶಾಚಿಕ ಪ್ರಕರಣವೊಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತೆಕ್ಕಟ್ಟೆಯ ಜಿತೇಂದ್ರ ಶೆಟ್ಟಿ (ಆರೋಪಿ-1) ಹಾಗೂ ಸುಶಾನ್ ಪೂಜಾರಿ (ಆರೋಪಿ-2) ಎಂಬ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ (POCSO) ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಬಂದಿಸಲಾಗಿದೆ. ಘಟನೆ ವಿವರ: ಸ್ನಾಪ್ಚಾಟ್ನಲ್ಲಿ ಶುರುವಾದ…
-

ವ್ಯಕ್ತಿಯ ಮೇಲೆ ಫೈರಿಂಗ್- ಮತ್ತೆ ರೌಡಿಗಳ ಅಟ್ಟಹಾಸ!!
ಧಾರವಾಡ: ವಿವಾದವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನ ಮೇಲೆ ಹುಬ್ಬಳ್ಳಿಯ ವ್ಯಕ್ತಿಯೋರ್ವ ಗುಂಡು ಹಾರಿಸಿರುವ ಪ್ರಕರಣ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಾಳು ಮತ್ತು ಗುಂಡು ಹೊಡೆದವ ಬಗ್ಗೆ ಮಾಹಿತಿಯನ್ನ ಪೊಲೀಸರು ನಿಖರವಾಗಿ ಕೆಲವೇ ನಿಮಿಷಗಳಲ್ಲಿ ಹೇಳಲಿದ್ದು, ಗುಂಡು ತಗುಲಿರುವ ವ್ಯಕ್ತಿಯನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
-

ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ವೇಳೆ ಅಪಹರಣ: 112 ಕರೆ ಮೂಲಕ ಬಯಲಾಯ್ತು ಭೀಕರ ಘಟನೆ
ಬೆಂಗಳೂರು: ನಗರದ ಹೊರವಲಯದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ವಿಮಾನ ನಿಲ್ದಾಣಕ್ಕೆ ಹೋಗಿದ್ದ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತನನ್ನು ಮರ್ಸಿಡಿಸ್ ಬೆಂಜ್ (Mercedes-Benz) ಕಾರಿನಲ್ಲಿ ಬಂದ ಗ್ಯಾಂಗ್ವೊಂದು ಅಪಹರಿಸಿ, ಚಾಕು ಹಾಗೂ ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿದ್ದಲ್ಲದೆ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಏನಿದು ಘಟನೆ?ಮೊಹಮ್ಮದ್ ರಫೀಕ್ (30) ಮೂಲತಃ ಕೇರಳದವರಾಗಿದ್ದು, ಕಳೆದ ಆರು ತಿಂಗಳಿನಿಂದ ಬೆಂಗಳೂರಿನಲ್ಲಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











