Category: ರಾಜ್ಯ

  • ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳ ಅರೆಸ್ಟ್
    , ,

    ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳ ಅರೆಸ್ಟ್

    ಶಿವಮೊಗ್ಗ: ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್​​ ಆಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಜುನಾಥ್​​ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್​​ ಕಳ್ಳ ಎಂಬುದು ಗೊತ್ತಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದಲ್ಲಿ ಮೇ 23ರಂದು ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ.ಅಬ್ಬಲಗೇರಿ ಗ್ರಾಮದಲ್ಲಿ ಕಾರು ನಿಲ್ಲಿಸಿ ಪ್ರೇಮಿಗಳು ಮಾತನಾಡುತ್ತಿದ್ದ ವೇಳೆ ಕಾರಲ್ಲಿ ಬಂದಿದ್ದ ಆರೋಪಿ ಮಂಜುನಾಥ್, ಯುವತಿಯ ಕೊರಳಲ್ಲಿದ್ದ 10…

    Continue Reading

  • ಅತ್ತೆ-ಪತಿಯ ಎದುರಲ್ಲೇ ಆಸಿಡ್ ಸೇವಿಸಿದ ಯುವತಿ : ಚಿನ್ನದ ಬೇಡಿಕೆಗೆ ಬಲಿಯಾದ ಜೀವ
    ,

    ಅತ್ತೆ-ಪತಿಯ ಎದುರಲ್ಲೇ ಆಸಿಡ್ ಸೇವಿಸಿದ ಯುವತಿ : ಚಿನ್ನದ ಬೇಡಿಕೆಗೆ ಬಲಿಯಾದ ಜೀವ

    ಕಾಸರಗೋಡು : ಪತಿ ಮತ್ತು ಅತ್ತೆಯ ಕಣ್ಣೆದುರಲ್ಲೇ ನವವಿವಾಹಿತೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣಲಂನಲ್ಲಿ ನಡೆದಿದೆ. ಚಿನ್ನದ ಆಭರಣಗಳಿಗಾಗಿ ಪತಿಯ ಕುಟುಂಬದವರು ನೀಡುತ್ತಿದ್ದ ಸರಣಿ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.ಮೂಲತಃ ಬದಿಯಡ್ಕದ ಚೆರ್ಲಡುಕ್ಕಂ ನಿವಾಸಿಯಾದ ಫಾತಿಮತ್ ಸುಫೈದಾ (24) ಮೃತ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಆದಿಲ್‌ನನ್ನು ವಿದ್ಯಾನಗರ ಪೊಲೀಸರು ಬಂಧಿಸಿ…

    Continue Reading

  • ಪ್ರವಾಸಿಗರ ದಟ್ಟಣೆ ನಡುವೆ ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ
    , ,

    ಪ್ರವಾಸಿಗರ ದಟ್ಟಣೆ ನಡುವೆ ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ

    ಹೆಬ್ರಿ: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ವಾಹನಗಳ ದಟ್ಟಣೆಯಿಂದಾಗಿ ಪ್ರತಿದಿನ ಇಲ್ಲಿ…

    Continue Reading

  • ಮಂಗಳೂರು: ಜೂ.1ರಿಂದ ಸೆ.30ರವರೆಗೆ ರಸ್ತೆ, ಗುಡ್ಡ ಅಗೆತಕ್ಕೆ ನಿರ್ಬಂಧ
    ,

    ಮಂಗಳೂರು: ಜೂ.1ರಿಂದ ಸೆ.30ರವರೆಗೆ ರಸ್ತೆ, ಗುಡ್ಡ ಅಗೆತಕ್ಕೆ ನಿರ್ಬಂಧ

    ಮಂಗಳೂರು:  ಮುಂಗಾರು ಮಳೆಯ ಸಂದರ್ಭ ಗುಡ್ಡಕುಸಿತ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿ ತಪ್ಪಿಸಲು ಜೂ. 1ರಿಂದ ಸೆಪ್ಟಂಬರ್ 30ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಗುಡ್ಡ ಹಾಗೂ ಮಣ್ಣು ಅಗೆಯುವುದನ್ನು ನಿಷೇಧಿಸಲಾಗಿದೆ. ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಅವರು ಈ ಬಗ್ಗೆ ಪ್ರಕಟನೆಯಲ್ಲಿ ಸೂಚನೆ ನೀಡಿದ್ದು, ಇಂತಹ ಯಾವುದೇ ರೀತಿಯ ಅಗೆತದ ಕಾಮಗಾರಿ ನಡೆಸದಂತೆ ಹಾಗೂ ಈ ಅವಧಿಯಲ್ಲಿ ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣ ವಾಗಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.ಅಧಿಕೃತ ಅನುಮತಿ ಪಡೆದ ನಂತರ…

    Continue Reading

  • ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ!!
    ,

    ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ!!

    ಬೆಳಗಾವಿ: ಇಲ್ಲಿನ ಪ್ರಸಿದ್ಧ ಕೆಎಲ್‌ಇ (KLE) ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಹಿರಿಯ ವೈದ್ಯ ಡಾ. ದಿನೇಶ್ ಭಟ್ಕಳ್ (60+) ಅವರು ಶ್ವಾಸಕೋಶ ಕ್ಯಾನ್ಸರ್‌ನ ತೀವ್ರ ನೋವು ತಡೆಯಲಾರದೆ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ರಿವಾಲ್ವಾರ್‌ನಿಂದ ತಲೆಗೆ ಶೂಟ್ ಮಾಡಿಕೊಳ್ಳುವ ಮೂಲಕ ಅವರು ಜೀವನ ಕೊನೆಗಾಣಿಸಿದ್ದಾರೆ. ಕ್ಯಾನ್ಸರ್ ನೋವಿನಿಂದ ಬಳಲಿಕೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾದ ಡಾ. ದಿನೇಶ್…

    Continue Reading

  • ವಾಟ್ಸಾಪ್ ಚಾಟ್‌ನಿಂದ ಶುರುವಾದ ಜಗಳ – ಯುವಕನ ಮೇಲೆ ಮಾರಣಾಂತಿಕ ಹಲ್ಲೆ
    , ,

    ವಾಟ್ಸಾಪ್ ಚಾಟ್‌ನಿಂದ ಶುರುವಾದ ಜಗಳ – ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಬೆಂಗಳೂರು: ಜಿಮ್ ವಾಟ್ಸಾಪ್ ಗ್ರೂಪ್‌ನಲ್ಲಿ ಕಿರಿಕ್ ಆಗಿದ್ದ ಹಿನ್ನೆಲೆ ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ.ಟ್ರೈನರ್ ಬಗ್ಗೆ ಮಾತಾಡ್ತೀಯಾ ಎಂದು ರೊಚ್ಚಿಗೆದ್ದು ಅನ್ಶ್ ಠಾಕೂರ್ ಎಂಬಾತನ ಮೇಲೆ ಮತಿನ್ ಮತ್ತು ಗ್ಯಾಂಗ್ ಹಿಗ್ಗಾಮುಗ್ಗ ಹಲ್ಲೆ ಮಾಡಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪದವಿ ಓದುತ್ತಾ ಪಾರ್ಟ್ ಟೈಂ ಜಿಮ್ ಟ್ರೈನರ್ ಆಗಿರುವ ಅನ್ಶ್ ಠಾಕೂರ್ ಈ ಹಿಂದೆ ಇಲಿಯಾಜ್ ಎಂಬಾತನಿಂದ ಖಾಸಗಿ ಜಿಮ್‌ನಲ್ಲಿ…

    Continue Reading

  • ಜ್ಯುವೆಲರ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಾಸ್ಟರ್ ಪ್ಲಾನ್ ಫೇಲ್
    , ,

    ಜ್ಯುವೆಲರ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಾಸ್ಟರ್ ಪ್ಲಾನ್ ಫೇಲ್

    ಅಹಮದಾಬಾದ್: ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯೂ ನರೋಡಾ ನಿವಾಸಿ ಹರ್ಷಿದಾ ರಾಜೇಂದ್ರಕುಮಾರ್ ಶೆಟ್ಟಿ ಮತ್ತು ವಸ್ತ್ರಲ್ ನಿವಾಸಿ ಮಯೂರ್ ಅಶೋಕ್‌ಭಾಯ್ ಮಾಲಿ ಎಂದು ಗುರುತಿಸಲಾಗಿದೆ.ನಿಕೋಲ್ ಪ್ರದೇಶದ ಗ್ರಾವಿಟಿ ಶಾಪಿಂಗ್ ಮಾಲ್‌ನಲ್ಲಿರುವ ದರ್ಶನ್ ಶಾ ಅವರಿಗೆ ಸೇರಿದ ‘ಅಭೂಷಣ್ ಜ್ಯುವೆಲರ್ಸ್’ ಮಳಿಗೆಯಲ್ಲಿ ಹರ್ಷಿದಾ ಶೆಟ್ಟಿ ಕಳೆದ 11 ತಿಂಗಳಿನಿಂದ ಸೇಲ್ಸ್‌ವುಮನ್ ಆಗಿ ಕೆಲಸ…

    Continue Reading

  • KGFನಲ್ಲಿ ರೌಡಿಶೀಟರ್‌ಗೆ ಶಾಕ್: ಮಗಳ ಮದುವೆಯಲ್ಲೇ ಪೊಲೀಸರ ಕಾರ್ಯಾಚರಣೆ
    , ,

    KGFನಲ್ಲಿ ರೌಡಿಶೀಟರ್‌ಗೆ ಶಾಕ್: ಮಗಳ ಮದುವೆಯಲ್ಲೇ ಪೊಲೀಸರ ಕಾರ್ಯಾಚರಣೆ

    ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್‌ (KGF) ನಗರದಲ್ಲಿ ಸಿನಿಮೀಯ ಶೈಲಿಯ ಪೊಲೀಸ್ ಕಾರ್ಯಾಚರಣೆಯೊಂದು ನಡೆದಿದೆ. ಮಗಳ ಮದುವೆ ಖರ್ಚಿಗಾಗಿ ಉದ್ಯಮಿಯೊಬ್ಬರಿಗೆ ಹೆದರಿಸಿ, ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ, ಈಗಾಗಲೇ ಗಡಿಪಾರಾಗಿದ್ದ ರೌಡಿಶೀಟರ್‌ನನ್ನು ಪೊಲೀಸರು ಮದುವೆ ಮಂಟಪದಿಂದಲೇ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ನಗರದ ಸುಸೈಪಾಳ್ಯಂ ಏರಿಯಾದ ನಿವಾಸಿ, ಕುಖ್ಯಾತ ರೌಡಿಶೀಟರ್ ಸ್ಟಾನ್ಲಿ ಬಂಧಿತ ಆರೋಪಿಯಾಗಿದ್ದಾನೆ. ಚರ್ಚ್‌ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ರೌಡಿಯನ್ನು ಪೊಲೀಸರು ಏಕಾಏಕಿ ಕಾರ್ಯಾಚರಣೆ ನಡೆಸಿ ಹೊತ್ತೊಯ್ದಿರುವ ದೃಶ್ಯ ಈಗ ವೈರಲ್ ಆಗಿದೆ. ಪೊಲೀಸ್…

    Continue Reading

  • ಜಯಮಹಲ್ ಹೋಟೆಲ್‌ನಲ್ಲಿ ಪಿಸ್ತೂಲ್ ಮ್ಯಾಗಜೀನ್ ಪತ್ತೆ; ತನಿಖೆ ತೀವ್ರ
    , ,

    ಜಯಮಹಲ್ ಹೋಟೆಲ್‌ನಲ್ಲಿ ಪಿಸ್ತೂಲ್ ಮ್ಯಾಗಜೀನ್ ಪತ್ತೆ; ತನಿಖೆ ತೀವ್ರ

    ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ ಸರಿಯಾಗಿ ಸ್ಪಂದಿಸದ ಕಾರಣ ಹೋಟೆಲ್ ಮ್ಯಾನೇಜರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಡೆದಿದ್ದೇನು? ಕಳೆದ ಏಪ್ರಿಲ್ 27ರಂದು ರಾತ್ರಿ…

    Continue Reading

  • ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು
    ,

    ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು

    ಕೋಲಾರ: ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿಯನ್ನು ನುಂಗಿದ ಎರಡು ವರ್ಷದ ಮಗು, ಅದು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಮಾಲೂರು ಪಟ್ಟಣದ ಗಾಂಧಿ ಸರ್ಕಲ್ ಬಳಿ ಸೋಮವಾರ ನಡೆದಿದೆ. ಮಗು ವಿಜಯೇಂದ್ರ ಮನೆಯಲ್ಲಿ ಎಂದಿನಂತೆ ಆಟವಾಡುತ್ತಿದ್ದಾಗ ಅಲ್ಲಿದ್ದ ಬೆಟ್ಟದ ನೆಲ್ಲಿಕಾಯಿಯನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಈ ವೇಳೆ ನೆಲ್ಲಿಕಾಯಿ ಆಕಸ್ಮಿಕವಾಗಿ ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಗಾಬರಿಗೊಂಡ ಪೋಷಕರು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲೇ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed