Category: ರಾಜ್ಯ
-

ಮಂಡ್ಯದಲ್ಲಿ ನಿಲ್ಲುತ್ತಿಲ್ಲ ಎಗ್ಗಿಲ್ಲದೇ ಅಕ್ರಮ ಕಲ್ಲುಗಣಿಗಾರಿಕೆ..!! ಜಿಲ್ಲಾಧಿಕಾರಿ ನಿಷೇಧಾಜ್ಞೆ ಗೂ ಬಗ್ಗದ ಭಕ್ಷಕರು
ಮಂಡ್ಯ: ಜಿಲ್ಲಾಧಿಕಾರಿಯವರು ತಡೆ ನೀಡಿದ ಸ್ಥಳದಲ್ಲಿ ಅನಧಿಕೃತವಾಗಿ ಮತ್ತೆ ಎಗ್ಗಿಲ್ಲದೇ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಶ್ ಗೌಡ ದೂರಿದರು. ಮಾ.11ರಂದು ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿನ ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಸಾಗಾಣಿಕೆ ನಿಯಂತ್ರಿಸಲು ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದರು. ಅದನ್ನು ಸಾಕಾರಗೊಳಿಸುವಲ್ಲಿ ‘ಟಾಸ್ಕ್ ಫೋರ್ಸ್’ ಸಮಿತಿ ವಿಫಲವಾಗಿದೆ ಎಂದು ಆರೋಪಿಸಿದರು. ಜಿಲ್ಲಾದ್ಯಂತ 103 ಕಲ್ಲು ಕೋರೆಗಳಿದ್ದು, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲೇ 52 ಕೇಂದ್ರಗಳಿವೆ. ಅವುಗಳಲ್ಲಿ 22ಕ್ಕೆ ಮಾತ್ರ ಪರವಾನಗಿ…
-

30 ಸಾವಿರ ಲಂಚ ಸ್ವೀಕಾರ : ಇಬ್ಬರು ಆರ್ಟಿಓ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆರ್ ಟಿ ಓ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರ್ಟಿಓ ಪ್ರೊಬೆಷನರಿ ಇನ್ಸ್ಪೆಕ್ಟರ್ ಗಳಾದ ದಿನೇಶ್ ಕುಮಾರ್ ಹಾಗೂ ಕಿರಣ್ ಮತ್ತು ಖಾಸಗಿ ವ್ಯಕ್ತಿ ರಮೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಗೂಗಲ್ ಪೇ ಮೂಲಕ 2000, 1000 ನಗದು ಲಂಚವನ್ನು ಪಡೆದಿದ್ದರು. ಇಂದು ಖಾಸಗಿ ವ್ಯಕ್ತಿ ರಮೇಶ್ 300 ರೂಪಾಯಿ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ನೈಸ್ ರಸ್ತೆಯಲ್ಲಿ ವಾಹನ ತಪಾಸನೆ…
-

ಆಂಟಿಯ ಬ್ಲ್ಯಾಕ್ ಮೇಲ್ ಗೆ ಹೆದರಿದ ಜಿಮ್ ಟ್ರೇನರ್ : ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಯುವಕ
ಬೆಂಗಳೂರಲ್ಲಿ ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್ಮೇಲ್ಗೆ ಸಿಲುಕಿದ್ದ 28 ವರ್ಷದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ನೆಲಮಂಗಲ ತಾಲೂಕಿನ ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಇವರು ಕೆಲಸ ಮಾಡುತ್ತಿದ್ದ ಜಿಮ್ಗೆ ಫಿಟ್ನೆಸ್ಗಾಗಿ ಬರುತ್ತಿದ್ದ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಈ ಪರಿಚಯ ಸಲುಗೆಗೆ ತಿರುಗಿ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ.…
-

ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಲೂಟಿ- ತಾ.ಪಂ. ಸಿಬ್ಬಂದಿ ಅಮಾನತು!!
ತುಮಕೂರು: ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡಿದ ಅಕ್ರಮ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದ್ದು, ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ. ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದರ ಬಗ್ಗೆ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ ಬೆಂಗಳೂರಿನ ಕೇಂದ್ರ ಕಚೇರಿಯಿಂದ ನಡೆದ ಆಡಿಟ್ ವೇಳೆ ದಾಖಲೆಗಳಲ್ಲಿ ವ್ಯತ್ಯಾಸ ಪತ್ತೆಯಾಯಿತು.…
-

ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹತ್ಯೆ!! 15 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಮಸಣಕ್ಕೆ!
ಧಾರವಾಡ: ಶಾಂತಿಯುತ ನಗರವಾಗಿರುವ ವಿದ್ಯಾಕಾಶಿ ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ನಡೆದಿದ್ದೇನು? ಮನೆಗೇ ನುಗ್ಗಿದ ಹಂತಕರು! ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು. ಇಂದು ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ…
-

AEE ಅಜಯ್ ಸಿಂಗ್ ಬಳಿ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಸೇರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ!!
ಬೆಳಗಾವಿ: ಲೋಕಾಯುಕ್ತ ಪೊಲೀಸರು (Lokayutha Police) ಮತ್ತೊಂದು ದೊಡ್ಡ ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ (Crores) ಪತ್ತೆಯಾಗಿದೆ. DUDC ಎಇಇ ಅಜಯ್ ಸಿಂಗ್ ರಜಪೂತ ಅವರ ಮನೆ ಮತ್ತು ಆಸ್ತಿಗಳ ಮೇಲೆ ಎರಡು ದಿನಗಳ ಕಾಲ ನಡೆದ ಲೋಕಾಯುಕ್ತ ದಾಳಿ ಮುಗಿದಿದೆ. ಈ ದಾಳಿಯಲ್ಲಿ ಬರೋಬ್ಬರಿ 14 ಕೋಟಿ ರೂಪಾಯಿ ಮೀರಿದ ಅಕ್ರಮ ಆಸ್ತಿ ಪತ್ತೆಯಾಗಿದೆ.DUDC ಎಇಇ ಅಜಯಸಿಂಗ್ ರಜಪೂತ ಅವರ…
-

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ..!!
ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ(15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 2000 ಅಡಿ ಆಳದ ಪ್ರಪಾತದಲ್ಲಿ ಮೃತದೇಹ ಪತ್ತೆಯಾಗಿದೆ. ಮಂಗಳವಾರ(ಏ.7) 41 ಮಂದಿ ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶ್ರೀನಂದಾ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಬಳಿಕ…
-

ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ
ಶಿವಮೊಗ್ಗ: ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು, ರೈತನಿಂದ ಲಂಚ ಸ್ವೀಕರಿಸಿದ್ದ ಅಧಿಕಾರಿಯೊಬ್ಬರಿಗೆ ನ್ಯಾಯಾಲಯವು ಈಗ ತಕ್ಕ ಶಿಕ್ಷೆ ವಿಧಿಸಿದೆ. ಸುಮಾರು ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಈ ಭ್ರಷ್ಟಾಚಾರ ಪ್ರಕರಣದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಂದಿನ ಜಿಲ್ಲಾ ವ್ಯವಸ್ಥಾಪಕ ಆರ್.ಎಸ್. ಪರಮೇಶ್ವರಪ್ಪ ಅವರಿಗೆ ಜೈಲು ಹಾಗೂ ದಂಡದ ಶಿಕ್ಷೆಯಾಗಿದೆ. ಪ್ರಕರಣದ ಹಿನ್ನೆಲೆ: ಏನಿದು ಘಟನೆ? 2017ರ ಜುಲೈ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಸಾಗರ ತಾಲ್ಲೂಕಿನ ಹೊಸಗುಂದ ನಿವಾಸಿ ಹೆಚ್.ಎಸ್. ಜನಾರ್ಧನ ಎಂಬುವವರು…
-

ಭೀಕರ ಮರ್ಡರ್ : ಸರ್ಕಾರಿ ಶಾಲಾ ಶಿಕ್ಷಕಿಯ ಹತ್ಯೆಗೈದು, ಶವ ಸುಟ್ಟುಹಾಕಿದ ಹಂತಕರು
ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ ಎಂದು ತಿಳಿದುಬಂದಿದೆ. ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬೀದರ್ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು.…
-

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಬಂಧನ
ಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್ಮೇಲ್, ಲೈಂಗಿಕ ದೌರ್ಜನ್ಯ ಆರೋಪದಡಿ ಉದ್ಯಮಿಯೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವೀಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಮಹಿಳಾ ಅಧಿಕಾರಿ ಕೊನೆಗೂ ಪೊಲೀಸರಿಗೆ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ ಇಂದಿರಾನಗರ ಪೊಲೀಸ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











