Category: ರಾಜ್ಯ
-

4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ : 10 ಆರೋಪಿಗಳು ಅರೆಸ್ಟ್
ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 4 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳ ಮೂಲದ 7 ಆರೋಪಿಗಳು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. 3 ಕೆಜಿ ಹೈಡ್ರೋಗಾಂಜಾ, 50 ಗ್ರಾಂ MDMA, 500 ಚರಸ್, 500 LSD ಮಾತ್ರೆ, 10 ಕೆಜಿ ಗಾಂಜಾ, ಎರಡು ಕಾರು ಹಾಗೂ 14 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೇರಳ…
-

ATM ವಾಹನ ದರೋಡೆ : HITACHI ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!
ಬೆಂಗಳೂರು : ಸಿಎಂಎಸ್ ಸೆಕ್ಯುರಿಟೀಸ್ ಕಂಪನಿ ಕಸ್ಟೋಡಿಯನ್ ವಾಹನ ಅಡ್ಡಗಟ್ಟಿ ರಾಬರಿ ಮಾಡಿದ್ದ ಪ್ರಕರಣ ಮಾಸುವ ಮುನ್ನ ಮತ್ತೆರಡು ಅಂಥದ್ದೇ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಟಿಎಂಗೆ ತುಂಬಿಸಲು ನೀಡಲಾಗಿದ್ದ 1 ಕೋಟಿಗೂ ಅಧಿಕ ಹಣ ವಂಚಿಸಲಾಗಿದ್ದು, ಕೋರಮಂಗಲ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಪೇಮೆಂಟ್ ಸರ್ವಿಸ್ ಕಂಪನಿಯೊಂದು ಕೆಲವು ಬ್ಯಾಂಕ್ಗಳ ಎಟಿಎಂ ಯಂತ್ರಗಳಿಗೆ ಹಣ ತುಂಬಿಸುವ ಪರವಾನಗಿ ಪಡೆದಿತ್ತು. ಆದರೆ ಈ ಕೆಲಸ ಮಾಡುತ್ತಿದ್ದ ಪ್ರವೀಣ್, ಧನಶೇಖರ್, ರಾಮಕ್ಕ ಹಾಗೂ ಹರೀಶ್ ಕುಮಾರ್ ಎಂಬ…
-

ಟೆಕ್ಕಿ ಶರ್ಮಿಳ ಕೊಲೆ ಕೇಸ್ ಗೆ ಟ್ವಿಸ್ಟ್ : ತನಿಖೆ ವೇಳೆ ಬಯಲಾಯಿತು ಬೆಚ್ಚಿ ಬೀಳಿಸೋ ಮರ್ಡರ್!
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ, ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣಕ್ಕೆ ಇದೀಗ ಮತ್ತೊಂದು ಸಿಕ್ಕಿದೆ. ತನಿಖೆ ವೇಳೆ ಬೆಚ್ಚಿ ಬೆಳಿಸುವ ಮಾಹಿತಿಯನ್ನು ಆರೋಪಿ ಕರ್ನಲ್ ಕುರೈ ಬಿಚ್ಚಿಟ್ಟಿದ್ದಾನೆ. ಆರೋಪಿಗೆ ಪ್ರೀತಿಗಿಂತ ಆಕೆಯ ಮೇಲೆ ವಿಕೃತಿ ಮನಸ್ಸು ಇತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿ ಕರ್ನಲ್ ಶರ್ಮಿಳಾ ಮೇಲೆ ಲೈಂಗಿಕ ವಿಕೃತಿ ಹೊಂದಿದ್ದ ಅಲ್ಲದೇ ಶರ್ಮಿಳಾ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ವಿಚಾರಣೆಯ ವೇಳೆ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ತನಿಖೆ ಬೆಳೆ…
-

ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!
ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ (13) ಮೃತಪಟ್ಟವರು. ಮನೆಯ ತಂಬಾಕು…
-

ಬಿಯರ್ ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ದಂಡ
ಬಿಯರ್ ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 8.76 ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೋ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಈ ಪ್ರಕರಣವನ್ನು 8 ತಿಂಗಳ ಅವಧಿಯಲ್ಲಿ ಇತ್ಯರ್ಥಗೊಳಿಸಿ ನಾಲ್ವರಿಗೆ ಕಠಿಣ ಶಿಕ್ಷೆ ಪ್ರಕಟಿಸಲಾಗಿದೆ. ಸಾಕೀಬ್ ನಿಜಾಮಿ (22), ರವಿ ನಾಯ್ಯೋಡಿ ಜೀವಾವಧಿ ಶಿಕ್ಷೆ ಹಾಗೂ 8.76 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ರೋಹನ್ ಪಾಟೀಲ್, ಅಶುತೋಷ್ ಪಾಟೀಲ್ಗೆ 20 ವರ್ಷ ಜೈಲು…
-

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ
ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅಲ್ಲದೇ ಅವರು ಕರೆ ಮಾಡಿದಾಗ ಕಡ್ಡಾಯವಾಗಿ ಸ್ವೀಕರಿಸುವಂತೆ ರಾಜ್ಯ ಸರ್ಕಾರವು ಖಡಕ್ ಆದೇಶ ಮಾಡಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ…
-

ವೈದ್ಯ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಆರೆಸ್ಟ್..!!
ಕಾರವಾರ: ಸಾಮಾಜಿಕ, ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ್ದಂತ ಕುಟುಂಬಕ್ಕೆ ಸೇರಿದ್ದಂತ ರಾಜೀವ್ ಪಿಕಳೆ ಅವರನ್ನು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತನ್ನನ್ನು ತೇಜೋವಧೆ ಮಾಡಿದ ಕಾರಣಕ್ಕಾಗಿ ರಾಜೀವ್ ಪಿಕಳೆ ಎನ್ನುವಂತ ವೈದ್ಯರೊಬ್ಬರು ತಮ್ಮ ಡಬ್ಬಲ್ ಬ್ಯಾರಲ್ ಗನ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮಾಡಿದಂತ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಸುಭಾಷ್, ಹರಿಶ್ಚಂದ್ರ ಎಂಬುದಾಗಿ ತಿಳಿದು ಬಂದಿದೆ. ಅಂಕೋಲಾ ಠಾಣೆಯ…
-

ಜೂನಿಯರ್ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ : 22 ಮಂದಿ ವಿರುದ್ದ `FIR’ ದಾಖಲು.!
ಜೂನಿಯರ್ ವಿದ್ಯಾರ್ಥಿಗಳನ್ನು ರ್ಯಾಕಿಂಗ್ ಮಾಡಿದ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 22 ಕಾಲೇಜು ವಿದ್ಯಾರ್ಥಿಗಳು ಮತ್ತು ಹೊರಗಿನ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಪ್ರವೇಶ ವಿಭಾಗದ ಮುಖ್ಯಸ್ಥ ಮಿಧುನ್ ಮಾಧವನ್ ಅವರು ನೀಡಿದ ದೂರಿನ ಆಧಾರದ ಮೇಲೆ ಜನವರಿ 16 ರಂದು ಪ್ರಕರಣ ದಾಖಲಿಸಲಾಗಿದೆ…
-

ಡಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿಕೊಂಡು ಆಸ್ಪತ್ರೆ ನೌಕರ ಆತ್ಮ*ತ್ಯೆ
ಅಂಕೋಲಾ : ತಾಲೂಕಿನ ಅವರ್ಸಾ ಗ್ರಾಮದಲ್ಲಿ ಆಸ್ಪತ್ರೆಯ ಔಷಧ ವಿಭಾಗದ ನೌಕರನೋರ್ವ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರವಾರದ ಪಿಕಳೆ ನರ್ಸಿಂಗ್ ಹೋಂನ ನೌಕರ ರಾಜೀವ ಪಿಕಳೆ ಅವರು ಡಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು ಹದಿನೈದು ದಿನಗಳ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಪರಿಚಿತ ರೋಗಿಯ ಸಂಬಂಧಿಯೊಬ್ಬರು ಮಾಡಿದ ಆ ವಿಡಿಯೋದಿಂದಾಗಿ ರಾಜೀವ ಪಿಕಳೆ ತೀವ್ರ ಮಾನಸಿಕ ಖಿನ್ನತೆಗೆ…
-

ಮೊಹಮ್ಮದ್ ಶಬ್ಬೀರ್ ಕೊಲೆ ಕೇಸಲ್ಲಿ 8 ಆರೋಪಿಗಳು ಅರೆಸ್ಟ್..!!
ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಕೊಲೆ ಪ್ರಕರಣದಲ್ಲಿ ಬಂಡೆಪಾಳ್ಯ ಠಾಣೆಯ ಪೊಲೀಸರಿಂದ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ನೂರುಲ್ಲಾ, ನದೀಮ್, ಸಲ್ಮಾನ್ ಖಾನ್, ಮೊಹಮ್ಮದ್ ಆಲಿ, ಸೈಯದ್ ಇಸ್ಮಾಯಿಲ್, ಮೊಹಮ್ಮದ್ ಸಿದ್ಧಿಕ್, ಕಲೀಂ, ಉಮ್ರೇಜ್ ಸೆರೆ ಹಿಡಿಯಲಾಗಿದೆ. ಜನವರಿ.12ರಂದು ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಕೊಲೆ ಮಾಡಲಾಗಿತ್ತು. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಕೋರಮಂಗಲ ಠಾಣೆ ರೌಡಿ ಶೀಟರ್ ಶಬ್ಬ್ರೀರ್ ಹತ್ಯೆ ಮಾಡಲಾಗಿತ್ತು. ಶಬ್ಬೀರ್ ಹತ್ಯೆಯ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











