Category: ರಾಜ್ಯ

  • ಆರೋಗ್ಯ ಸಚಿವ ಯು ಟಿ ಖಾದರನಿಂದ ಗಲ್ಫ್ ಮಾದರಿಯಲ್ಲಿ ಆಗಲಿದೆಯಾ ಕರ್ನಾಟಕ ಆಹಾರ ಸುರಕ್ಷತಾ ನಿಯಮ
    ,

    ಆರೋಗ್ಯ ಸಚಿವ ಯು ಟಿ ಖಾದರನಿಂದ ಗಲ್ಫ್ ಮಾದರಿಯಲ್ಲಿ ಆಗಲಿದೆಯಾ ಕರ್ನಾಟಕ ಆಹಾರ ಸುರಕ್ಷತಾ ನಿಯಮ

    ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ಹೋಟೆಲ್‌ಗಳು ಹಾಗೂ ಆಹಾರ ತಯಾರಿಕಾ ಸಿಬ್ಬಂದಿಯ ಸ್ವಚ್ಛತೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತದೆ. ಅಡುಗೆ ಮಾಡುವ ಸಿಬ್ಬಂದಿಗೆ ಕಡ್ಡಾಯ ವೈದ್ಯಕೀಯ ಪರೀಕ್ಷೆ, ಸ್ವಚ್ಛ ಉಡುಪು, ತಲೆಗೆ ಹೇರ್‌ನೆಟ್, ಕೈಗವಸು ಸೇರಿದಂತೆ ಹಲವು ನಿಯಮಗಳನ್ನು ಅನುಸರಿಸಲಾಗುತ್ತದೆ. ಹೋಟೆಲ್‌ಗಳ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಕರ್ನಾಟಕದಲ್ಲಿ ಪರಿಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವು ಹೋಟೆಲ್‌ಗಳಲ್ಲಿ ಅಡುಗೆ ಸಿಬ್ಬಂದಿ ಉದ್ದನೆಯ ಉಗುರುಗಳನ್ನು ಇಟ್ಟುಕೊಳ್ಳುವುದು, ತಲೆಗೆ ಕ್ಯಾಪ್ ಅಥವಾ ಹೇರ್‌ನೆಟ್ ಧರಿಸದಿರುವುದು, ಕೈಗವಸು ಬಳಸದಿರುವುದು ಸೇರಿದಂತೆ…

    Continue Reading

  • ಬಸ್ ನಿಲ್ದಾಣ, ಪಿಜಿ, ರೈಲ್ವೆ ಕ್ಯಾಂಟೀನ್, ಫ್ಲೈಟ್ ಗಳಲ್ಲಿ ಕೊಡೊ ಆಹಾರ ಸಹ ಪರಿಶೀಲನೆ ಮಾಡ್ತೇವೆ – ಯುಟಿ ಖಾದರ್ 
    ,

    ಬಸ್ ನಿಲ್ದಾಣ, ಪಿಜಿ, ರೈಲ್ವೆ ಕ್ಯಾಂಟೀನ್, ಫ್ಲೈಟ್ ಗಳಲ್ಲಿ ಕೊಡೊ ಆಹಾರ ಸಹ ಪರಿಶೀಲನೆ ಮಾಡ್ತೇವೆ – ಯುಟಿ ಖಾದರ್ 

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇತ್ತೀಚೆಗೆ ಪ್ರಸಿದ್ಧ ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಸತತ ದಾಳಿ ನಡೆಸಿ ಶಾಕ್ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು, ಇದೀಗ ತಮ್ಮ ತನಿಖಾ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿದ್ದಾರೆ. ಇನ್ಮುಂದೆ ಕೇವಲ ಹೋಟೆಲ್‌ಗಳಿಗೆ ಮಾತ್ರ ಸೀಮಿತವಾಗದೆ, ಖಾಸಗಿ ಪಿಜಿಗಳು (PG), ಹಾಸ್ಟೆಲ್‌ಗಳು, ಬಸ್ ನಿಲ್ದಾಣಗಳು ಹಾಗೂ ಮದುವೆ ಮಂಟಪಗಳ ಮೇಲೆಯೂ ಕಣ್ಣಿಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

    Continue Reading

  • ಹನೂರು ಶೂಟೌಟ್ ಪ್ರಕರಣ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ..!!
    ,

    ಹನೂರು ಶೂಟೌಟ್ ಪ್ರಕರಣ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ..!!

     ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬೆಳಗ್ಗೆ 5 ಗಂಟೆಗೆ ಮಾಹಿತಿ ಬಂದಿದೆ. ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ. ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದಿದ್ದು, ಅನೇಕ ಸಾಕ್ಷಿಗಳು ವಸ್ತುಗಳು, ಬಂದೂಕು ವಶಪಡಿಸಿಕೊಳ್ಳಲಾಗಿದೆ. ಮಾಧ್ಯಮಗಳು ಕೆಲವು ವಿಚಾರ ಪ್ರಸಾರ ಮಾಡುತ್ತಿವೆ. ಕೆಲವರನ್ನು ಬಂಧಿಸಲಾಗಿದ್ದು, ಶವ ಪರೀಕ್ಷೆಗೆ…

    Continue Reading

  • ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಪೊಲೀಸರು ಕೋರ್ಟ್ ಅನುಮತಿ ಪಡೆಯುವುದು ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ಆದೇಶ
    ,

    ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಪೊಲೀಸರು ಕೋರ್ಟ್ ಅನುಮತಿ ಪಡೆಯುವುದು ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ಆದೇಶ

    ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 102ರ ಅಡಿಯಲ್ಲಿ (ಹಾಗೂ ನೂತನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – BNSS ಅಡಿಯಲ್ಲಿ) ತನಿಖಾಧಿಕಾರಿಗಳಿಗೆ ನೀಡಲಾಗಿರುವ ಅಧಿಕಾರಗಳ ಕುರಿತಾದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ. ತನಿಖಾ ಹಂತದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಅಥವಾ ಅನುಮಾನಾಸ್ಪದ ಹಣಕಾಸು ವಹಿವಾಟು ನಡೆದಿರುವ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಅಧಿಕಾರ ತನಿಖಾಧಿಕಾರಿಗೆ ಇದೆ. ಈ ಪ್ರಕ್ರಿಯೆ ನಡೆಸಲು ಪ್ರತಿ ಬಾರಿಯೂ ಮ್ಯಾಜಿಸ್ಟ್ರೇಟ್ ಅಥವಾ ನ್ಯಾಯಾಲಯದ ಪೂರ್ವಾನುಮತಿಯ ಅಗತ್ಯವಿರುವುದಿಲ್ಲ ಎಂದು…

    Continue Reading

  • ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಇಲ್ಲ : ಸಚಿವ ಯು.ಟಿ. ಖಾದರ್ ಸ್ಪಷ್ಟನೆ
    ,

    ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಇಲ್ಲ : ಸಚಿವ ಯು.ಟಿ. ಖಾದರ್ ಸ್ಪಷ್ಟನೆ

    ಜನರ ಆರೋಗ್ಯ ಹಿತದೃಷ್ಟಿಯಿಂದ ಜಾರಿಗೆ ತರಲಾಗಿರುವ ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ಆದೇಶವನ್ನು ಸರ್ಕಾರ ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ಈ ಕಠಿಣ ನಿರ್ಧಾರದಿಂದ ರಾಜ್ಯದ ಅಡಕೆ ಬೆಳೆಗಾರರಿಗಾಗಲಿ ಅಥವಾ ಅಡಕೆ ಮಾರುಕಟ್ಟೆಗಾಗಲಿ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದ್ದಾರೆ. ಗುಟ್ಕಾ ತಯಾರಿಕೆಯಲ್ಲಿ ಸ್ಥಳೀಯ ಅಡಕೆಯ ಬದಲಾಗಿ ನೆಪಾಳ, ಬಾಂಗ್ಲಾದೇಶಗಳಿಂದ ಆಮದು ಮಾಡಿಕೊಂಡ…

    Continue Reading

  • ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ ಆದೇಶ ಶೀಘ್ರ ವಾಪಸ್ : ಸಿಎಂ ಡಿಕೆ ಶಿವಕುಮಾರ್
    ,

    ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ ಆದೇಶ ಶೀಘ್ರ ವಾಪಸ್ : ಸಿಎಂ ಡಿಕೆ ಶಿವಕುಮಾರ್

    ರಾಜ್ಯಾದ್ಯಂತ ನಿಕೋಟಿನ್‌ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಹೊರಡಿಸಲಾಗಿದ್ದ ಸರ್ಕಾರದ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಏಕಾಏಕಿ ಕೈಗೊಂಡಿದ್ದ ಈ ನಿರ್ಧಾರಕ್ಕೆ ಆಡಳಿತ ಪಕ್ಷದ ಶಾಸಕರು ಹಾಗೂ ರೈತ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಮುಖ್ಯಮಂತ್ರಿಗಳು ಈ ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಈ ನಿಷೇಧದ ತೀರ್ಮಾನಕ್ಕೆ ಸ್ವತಃ ಕಾಂಗ್ರೆಸ್‌ನ ಕೆಲವು ಹಿರಿಯ ಶಾಸಕರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.…

    Continue Reading

  • ಗುಟ್ಕಾ ನಿಷೇಧ ಕಾಯ್ದೆ ಹಿಂಪಡೆಯಲು ಮುಖ್ಯಮಂತ್ರಿಗಳಿಗೆ ಅಡಿಕೆ ಬೆಳೆಗಾರರ ಮನವಿ..! ಇದು ಎಷ್ಟು ‌ಸರಿ??
    ,

    ಗುಟ್ಕಾ ನಿಷೇಧ ಕಾಯ್ದೆ ಹಿಂಪಡೆಯಲು ಮುಖ್ಯಮಂತ್ರಿಗಳಿಗೆ ಅಡಿಕೆ ಬೆಳೆಗಾರರ ಮನವಿ..! ಇದು ಎಷ್ಟು ‌ಸರಿ??

    ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಅಡಕೆ ಬಳಸಿ ತಯಾರಿಸುವ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ನಿಷೇಧ ಹೇರಲು ಮುಂದಾಗಿರುವುದು ರಾಜ್ಯದ ಅಡಕೆ ಬೆಳೆಗಾರರಲ್ಲಿ ತೀವ್ರ ಕಳವಳ ಮೂಡಿಸಿದೆ. ಈ ನಿರ್ಧಾರದಿಂದ ಅಡಕೆ ಮಾರುಕಟ್ಟೆ ಕುಸಿಯುವ ಭೀತಿ ಎದುರಾಗಿದ್ದು, ಅಡಿಕೆ ಬೆಳೆಗಾರರು ಗುಟ್ಕಾ ನಿಷೇಧ ಕಾಯ್ದೆ ಹಿಂಪಡೆಯಲು ಆರಗ ಜ್ಞಾನೇಂದ್ರ ಸಹಿತ ಡಿ.ಜಿ ಶಾಂತನಗೌಡ ನೇತ್ರತ್ವದ ನೀಯೋಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಗೆ ಮನವಿ ಮಾಡಿದ್ದಾರೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಯುವಜನರನ್ನು ರಕ್ಷಿಸುವ ಉದ್ದೇಶದಿಂದ ಕರ್ನಾಟಕ…

    Continue Reading

  • 20 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ‘PSI’
    ,

    20 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ‘PSI’

    ಹಾಸನ: ಪ್ರಕರಣವೊಂದರಲ್ಲಿ ನೆರವು ನೀಡಲು ದೂರುದಾರರಿಂದ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ (PSI) ಮಂಜುನಾಥ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ. ಘಟ್ಟದಹಳ್ಳಿ ಗ್ರಾಮದ ಸಂತೋಷ್ ಎಂಬುವರು ನೀಡಿದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಈ ಯಶಸ್ವಿ ದಾಳಿ ನಡೆಸಿದ್ದಾರೆ. ದೂರುದಾರರಾದ ಸಂತೋಷ್ ಅವರ ಬಳಿ ಪಿಎಸ್‌ಐ ಮಂಜುನಾಥ್ ಅವರು ಕೆಲಸ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಸಂತೋಷ್ ಅವರು ತಕ್ಷಣವೇ ಲೋಕಾಯುಕ್ತ ಪೊಲೀಸರನ್ನು…

    Continue Reading

  • ಹೋಟೆಲ್, ಪಬ್ ಆಯ್ತು, ಈಗ ಹಾಸ್ಟೆಲ್, ಪಿಜಿಗಳಲ್ಲಿನ ಆಹಾರ ಪರಿಶೀಲನೆಗೆ ಸಚಿವ ಯುಟಿ ಖಾದರ್ ಸೂಚನೆ
    ,

    ಹೋಟೆಲ್, ಪಬ್ ಆಯ್ತು, ಈಗ ಹಾಸ್ಟೆಲ್, ಪಿಜಿಗಳಲ್ಲಿನ ಆಹಾರ ಪರಿಶೀಲನೆಗೆ ಸಚಿವ ಯುಟಿ ಖಾದರ್ ಸೂಚನೆ

    ಹೋಟೆಲ್‌ಗಳ ಮೇಲೆ ಯಶಸ್ವಿ ದಾಳಿ ನಡೆಸಿ ಆಹಾರದ ಗುಣಮಟ್ಟ ಪರಿಶೀಲಿಸಿದ ಬೆನ್ನಲ್ಲೇ, ಇದೀಗ ರಾಜ್ಯದಾದ್ಯಂತ ಇರುವ ವಿವಿಧ ಹಾಸ್ಟೆಲ್‌ಗಳು ಹಾಗೂ ಪಿಜಿಗಳ (ಪೇಯಿಂಗ್ ಗೆಸ್ಟ್) ಮೇಲೂ ಆಹಾರ ತಪಾಸಣೆ ನಡೆಸಲು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ. ಸಾರ್ವಜನಿಕ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನೂತನ ಕಾರ್ಯಾಚರಣೆಯಡಿಯಲ್ಲಿ ಸರ್ಕಾರಿ ಹಾಸ್ಟೆಲ್‌ಗಳು, ಖಾಸಗಿ ಹಾಸ್ಟೆಲ್‌ಗಳು ಹಾಗೂ ಸಹಕಾರಿ ಸಂಸ್ಥೆಗಳ ಅಧೀನದಲ್ಲಿ ನಡೆಯುತ್ತಿರುವ ಹಾಸ್ಟೆಲ್‌ಗಳಲ್ಲಿ ಆಹಾರ…

    Continue Reading

  • ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟ ಸಂಪೂರ್ಣ ಬಂದ್..!!
    ,

    ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟ ಸಂಪೂರ್ಣ ಬಂದ್..!!

    ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟದ ಮೇಲೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ ನಿಯಮಾವಳಿಗಳು-2011 ರ ನಿಯಮ 2.3.4 ರ ಅಧಿಕಾರ ಬಳಸಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed