Category: ರಾಜ್ಯ
-

ಕೌಟುಂಬಿಕ ಆಸ್ತಿ ವಿವಾದ ಇತ್ಯರ್ಥಕ್ಕೆ ಕ್ರಿಮಿನಲ್ ಕಾನೂನು ಬಳಸುವಂತಿಲ್ಲ- ಹೈಕೋರ್ಟ್
ಕೌಟುಂಬಿಕ ಆಸ್ತಿ ವಿವಾದಗಳ ಇತ್ಯರ್ಥಕ್ಕಾಗಿ ಕ್ರಿಮಿನಲ್ ಕಾನೂನನ್ನು ಒತ್ತಡ ತಂತ್ರವಾಗಿ ಅಥವಾ ಚೌಕಾಸಿಯ ಅಸ್ತ್ರವಾಗಿ ಬಳಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 73 ವರ್ಷದ ವೃದ್ಧ ತಾಯಿ ಹಾಗೂ ಅವರ ಹಿರಿಯ ಮಗಳ ವಿರುದ್ಧ ಕಿರಿಯ ಮಗಳು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿರುವ ನ್ಯಾಯಪೀಠ, ಖಾಸಗಿ ಜಗಳಗಳಲ್ಲಿ ಅನುಕೂಲ ಪಡೆಯಲು ಕಾನೂನು ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ತೀವ್ರವಾಗಿ ತಖ್ಖೆ ಮಾಡಿದೆ. ಅರ್ಜಿದಾರರಾದ 73 ವರ್ಷದ ವೃದ್ಧೆ ಹಾಗೂ ಅವರ ಹಿರಿಯ ಮಗಳು ತಮ್ಮ…
-

ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ಫುಡ್ ನಿಷೇಧ: ಯು.ಟಿ. ಖಾದರ್ ಆದೇಶ
ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ಆದೇಶ ಹೊರಡಿಸಿದ್ದಾರೆ. ಹೆಚ್ಚು ಕೊಬ್ಬಿನಂಶ ಇರುವ ಆಹಾರಗಳ ಕುರಿತು ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿದಾಗ ರಾಜ್ಯದ 134 ಶಾಲಾ-ಕಾಲೇಜುಗಳು ತಮ್ಮದೇ ಸ್ವಂತ ಕ್ಯಾಂಟಿನ್ಗಳಲ್ಲಿ ವಿದ್ಯಾರ್ಥಿಗಳಿಗೆ ಅನಾರೋಗ್ಯಕರ ಜಂಕ್ಫುಡ್ಗಳನ್ನು ಮಾರಾಟ ಮಾಡುತ್ತಿರುವುದು ತಿಳಿದುಬಂದಿತ್ತು. ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ…
-

ಖಾಸಗಿ ಬ್ರೋಕರ್ ರೊಬ್ಬರ ನಿಯಂತ್ರಣದಲ್ಲಿ “ರಾಜ್ಯ ವೈದ್ಯಕೀಯ ಸರಬರಾಜು ನಿಗಮ”??
ಸಾಲು ಸಾಲು ವಿವಾದ ಮತ್ತು ಎಡವಟ್ಟುಗಳ ಮೂಲಕ ಅಪಖ್ಯಾತಿಗೀಡಾಗಿರುವ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನೇ (ಕೆಎಸ್ಎಂಎಸ್ಸಿಎಲ್) ಮಧ್ಯವರ್ತಿಯೊಬ್ಬ ( ಬ್ರೋಕರ್) ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಬಗ್ಗೆ ಗುರುತರ ಆರೋಪಗಳು ಕೇಳಿಬಂದಿದೆ. ಪ್ರತಿ ವರ್ಷ ಬ್ಯಾಂಡೇಜ್ ಕ್ಲಾತ್, ಕಾಟನ್, ಸರ್ಜಿಕಲ್ ಗ್ಲೌಸ್, ಗ್ಲೂಕೋಸ್ ಬಾಟಲ್, ಆ್ಯಂಟಿಬಯಾಟಿಕ್ ಮಾತ್ರೆ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಗಾಗಿ ಆರೋಗ್ಯ ಇಲಾಖೆ ಅಧೀನದ ಕೆಎಸ್ಎಂಎಸ್ಸಿಎಲ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಸಾವಿರಾರು ಕೋಟಿ ರೂ. ಅನುದಾನ ಕೊಡುತ್ತಿದೆ. ಈ ಅನುದಾನ ಬಳಸಿಕೊಂಡು ನಿಗಮವು…
-

ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ 45% ಪಾಲು.!! ರಾಜ್ಯದಾದ್ಯಂತ ಭೂ ಮಾಲೀಕರಲ್ಲಿ ಆತಂಕ
ಬೆಂಗಳೂರು: ಕರ್ನಾಟಕ ಸರ್ಕಾರ ಹೊರಡಿಸಿರುವ ವಿವಾದಾತ್ಮಕ ಕರಡು ಅಧಿಸೂಚನೆಯೊಂದು ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭೂ ಮಾಲೀಕರಲ್ಲಿ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ. ಕುಟುಂಬದೊಳಗೆ ಪಿತ್ರಾರ್ಜಿತ ಆಸ್ತಿಯನ್ನು ಹಂಚಿಕೆ ಮಾಡುವ ಸಂದರ್ಭದಲ್ಲಿ ಸರ್ಕಾರಕ್ಕೂ ದೊಡ್ಡ ಪ್ರಮಾಣದ ಭೂಮಿ ಪಾಲು ನೀಡುವ ಪ್ರಸ್ತಾವನೆ ಈ ಕರಡಿನಲ್ಲಿ ಇರುವುದರಿಂದ, ಆಸ್ತಿ ಹಕ್ಕು ಮತ್ತು ಖಾಸಗಿ ಆಸ್ತಿಯಲ್ಲಿ ಸರ್ಕಾರದ ಹಸ್ತಕ್ಷೇಪದ ಕುರಿತು ಪ್ರಶ್ನೆಗಳು ಎದ್ದಿವೆ.ಜೂನ್ 4ರಂದು ಹೊರಡಿಸಲಾಗಿರುವ ಈ ಕರಡು ಅಧಿಸೂಚನೆಯಲ್ಲಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಅಧ್ಯಾಯ…
-

ಸಿಎಂ ಡಿಕೆ ಶಿವಕುಮಾರ್ ಪಿಎ ಎಂದು 15 ಲಕ್ಷ ರೂಪಾಯಿ ಪಡೆದು ವಂಚನೆ : ಓರ್ವ ಅರೆಸ್ಟ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ (30) ಎಂದು ಗುರುತಿಸಲಾಗಿದೆ. ವಂಚನೆಗೆ ಒಳಗಾದ ಮಂಜುನಾಥ್ ಹಂಜಿ ನೀಡಿದ ದೂರಿನನ್ವಯ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ದೂರುದಾರ ಮಂಜುನಾಥ್ ಹಂಜಿ ಅವರೊಂದಿಗೆ ಆರಂಭದಲ್ಲಿ ಸಲುಗೆ ಬೆಳೆಸಿಕೊಂಡಿದ್ದ ಹೇಮಂತ್ ಕುಮಾರ್,…
-

ಕರ್ತವ್ಯದ ಅವಧಿಯಲ್ಲೇ ಗುಂಡು-ತುಂಡು ಪಾರ್ಟಿ: 6 ಮಂದಿ PDO, ಮೂವರು ಸಿಬ್ಬಂದಿ ಅಮಾನತು!!
ಕರ್ತವ್ಯದ ಅವಧಿಯಲ್ಲಿ ಕಚೇರಿಗೆ ಗೈರುಹಾಜರಾಗಿ ಮದ್ಯ ಮತ್ತು ಮಾಂಸದ ಪಾರ್ಟಿ ಮಾಡಿದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO) ಹಾಗೂ ಮೂವರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ಹಿನ್ನೆಲೆ: ಕಳೆದ ಶುಕ್ರವಾರ (ಜುಲೈ 24) ಸಂಜೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಿನಲ್ಲಿ ಮದ್ಯ ಹಾಗೂ ಮಾಂಸ ಸೇವಿಸಿ ಮೋಜು-ಮಸ್ತಿ ಮಾಡುತ್ತಿದ್ದ ದೃಶ್ಯಗಳು ಮಾಧ್ಯಮಗಳಲ್ಲಿ ವರದಿಯಾಗಿದ್ದವು. ಕೆಲಸದ…
-

20,000 ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ DHO ಕಚೇರಿ ಅಧಿಕಾರಿ
ಅನುದಾನ ಬಿಡುಗಡೆ ಮಾಡಲು ಭ್ರಷ್ಟಾಚಾರದ ದಾರಿ ತುಳಿದಿದ್ದ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲೇ ಸಾರ್ವಜನಿಕರಿಂದ 20,000 ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಈ ಪ್ರಮುಖ ಕಾರ್ಯಾಚರಣೆ ನಡೆದಿದೆ. ಆಡಳಿತ ಮತ್ತು ಕಾರ್ಯಕ್ರಮ ಸಹಾಯಕ ಅಧಿಕಾರಿಯಾಗಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ಶ್ರೀಕಾಂತ್ ಬಾವಿಮನಿ ಎಂಬವರೇ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿಯಾಗಿದ್ದಾರೆ. ಜಿಲ್ಲಾ ಗುಣಮಟ್ಟ ಭರವಸೆ ಘಟಕಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾಗಬೇಕಿದ್ದ 1.3…
-

ಇಂದಿರಾ ಆವಾಸ್ ಯೋಜನೆಯ ಅನುದಾನ ದುರ್ಬಳಕೆ: ಪಿಡಿಒ, ಅಧ್ಯಕ್ಷ, ಸದಸ್ಯೆಗೆ 3 ವರ್ಷ ಜೈಲು!!
ಹೊಸಪೇಟೆ: ಇಂದಿರಾ ಆವಾಸ್ ಯೋಜನೆಯ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಬ್ಬಿಹಾಳು ಗ್ರಾಪಂ ಪಿಡಿಒ, ಅಧ್ಯಕ್ಷ ಹಾಗೂ ಸದಸ್ಯೆಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 90 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪಿಡಿಒ ವಸಂತರಾಜ್, ಅಧ್ಯಕ್ಷ ರಾಮಚಂದ್ರ ನಾಯ್ಕ ಹಾಗೂ ಸದಸ್ಯೆ ಹನುಮವ್ವ ಶಿಕ್ಷೆಗೆ ಒಳಗಾದ ಅಪರಾಧಿಗಳು. 2016ರಲ್ಲಿ ನಡೆದ ಅಕ್ರಮದ ಕುರಿತು ಲೋಕಾಯುಕ್ತ ಡಿವೈಎಸ್ಪಿ ಪಿ.ಎನ್.ಆರ್.ಮಹಾಂತರಡ್ಡಿ…
-

ಆರೋಗ್ಯ ಸಚಿವ ಯು.ಟಿ ಖಾದರ್ ರವರ ಮಹತ್ವದ ಯೋಜನೆ ಮತ್ತು ಬದಲಾವಣೆಗೆ ಕರ್ನಾಟಕದ ಜನತೆ ಫಿದಾ..!! ಆದರೆ ಈಗಿರುವ ಪ್ರಶ್ನೆ ಗುಟ್ಕಾ,ಪಾನ್ ಮಸಾಲ ಬ್ಯಾನ್ ಯಾವಾಗ??
ಕರ್ನಾಟಕ ಸರ್ಕಾರ ಜಂಕ್ ಫುಡ್ ಅನ್ನು ಶಾಲೆಗಳ ಸುತ್ತಮುತ್ತ, ಶಾಲಾ ಕ್ಯಾಂಪಸ್ಗಳಲ್ಲಿ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಲು ಆರೋಗ್ಯ ಸಚಿವ ಯು.ಟಿ. ಖಾದರ್ ನೀಡಿರುವ ಸೊಚನೆ ಮತ್ತು ಕ್ರಮ ಗಮನಾರ್ಹ. ಮಕ್ಕಳಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಬೆಳೆಸುವುದು ಹಾಗೂ ಜೀವನಶೈಲಿ ಸಂಬಂಧಿತ ಕಾಯಿಲೆಗಳನ್ನು ತಡೆಗಟ್ಟುವುದಾಗಿದೆ. ಆರೋಗ್ಯ ಸಚಿವರಾದ ತಕ್ಷಣವೇ ಯು.ಟಿ ಖಾದರ್ ಹಲವಾರು ಪ್ರಮುಖ ಬದಲಾವಣೆ ತಂದಿರುವುದು ಬಡ ಕುಟುಂಬಗಳಿಗೆ ಬಹಳ ಸಂತಸ ತಂದಿದೆ. ಗುಟ್ಕಾ ಸೇವನೆ ಆರೋಗ್ಯಕ್ಕೆ ಗಂಭೀರ ಹಾನಿಯನ್ನು ಉಂಟುಮಾಡುತ್ತದೆ.…
-

ಕೋಟ್ಯಾಂತರ ರೂ. ಮೌಲ್ಯದ ಡ್ರಗ್ಸ್ ಮಾರಾಟ ಪ್ರಕರಣ : 2 ಕಡೆ ED ದಾಳಿ
ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ನಗರದ ಎರಡು ಪ್ರಮುಖ ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಹೈದರಾಬಾದ್ನಲ್ಲಿ ದಾಖಲಾಗಿದ್ದ ಎನ್ಡಿಪಿಎಸ್ (NDPS) ಪ್ರಕರಣದ ಜಾಡು ಹಿಡಿದು ಹೊರಟಿರುವ ಅಧಿಕಾರಿಗಳು, ಅಕ್ರಮ ಹಣಕಾಸು ವಹಿವಾಟಿನ ಜಾಡನ್ನು ಪತ್ತೆಹಚ್ಚಲು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಜಂಟಿ ಕಾರ್ಯಾಚರಣೆಯ ಭಾಗವಾಗಿ ಹೈದರಾಬಾದ್ನ 7 ಪ್ರತ್ಯೇಕ ಸ್ಥಳಗಳ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿ,…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











