Category: ರಾಜ್ಯ
-

ದಸರಾ ಕಂಬಳಕ್ಕೆ ಮರಗಳ ಮಾರಣಹೋಮ : ಕ್ರೀಡಾ ಇಲಾಖೆ ಅಧಿಕಾರಿ ಸೇರಿ ಮೂವರ ವಿರುದ್ಧ ‘FIR’ ದಾಖಲು!
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಬಹುನಿರೀಕ್ಷಿತ ‘ದಸರಾ ಕಂಬಳ’ ಕ್ರೀಡಾಕೂಟವು ಈಗ ಆರಂಭಕ್ಕೆ ಮುನ್ನವೇ ತೀವ್ರ ವಿವಾದ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಕಂಬಳ ಕೂಟಕ್ಕಾಗಿ ಕೆಸರು ಗದ್ದೆ (ಟ್ರ್ಯಾಕ್) ನಿರ್ಮಿಸುವ ನೆಪದಲ್ಲಿ ಸಾತಗಳ್ಳಿ ಬಡಾವಣೆಯ ಮೈದಾನದಲ್ಲಿದ್ದ ಹತ್ತಾರು ಮರಗಳನ್ನು ನಿಯಮಬಾಹಿರವಾಗಿ ಕತ್ತರಿಸಿ ಪರಿಸರಕ್ಕೆ ಹಾನಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು (DD) ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್ಐಆರ್…
-

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್
ಮಹಿಳೆಯರ ಸುರಕ್ಷತೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಾರ್ಸೆಲ್ ನೀಡಲು ಬಂದ ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ಏಜೆಂಟ್, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಹಿನ್ನೆಲೆ ಫ್ಲಿಪ್ಕಾರ್ಟ್ ಡೆಲಿವರಿ ಬಾಯ್ ವಿಜಯ್ ಮಲ್ಲಿಕಾರ್ಜುನ್ ಕಾಮತ್ನನ್ನು ಮಾರತಹಳ್ಳಿ ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಯ ಹೇಳುವಂತೆ ಪಾರ್ಸೆಲ್ ತಲುಪಿಸಲು…
-

ಸ್ಟಾಕ್ ಮಾರ್ಕೆಟ್ ನಲ್ಲಿ ಲಾಸ್ : ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣು!
ಷೇರು ಮಾರುಕಟ್ಟೆಯಲ್ಲಿ (ಸ್ಟಾಕ್ ಮಾರ್ಕೆಟ್) ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕನನ್ನು ಕವನ್ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಕವನ್ ಇತ್ತೀಚಿನ ದಿನಗಳಲ್ಲಿ ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ಅದರಲ್ಲಿ ನಿರೀಕ್ಷಿತ ಮಟ್ಟದ ಲಾಭ ಸಿಗದೆ ಭಾರಿ ನಷ್ಟ ಅನುಭವಿಸಿದ್ದರು. ಇದರಿಂದಾಗಿ…
-

1 ಲಕ್ಷ ರೂ. ಲಂಚ ಸ್ವೀಕರಿಸಿದ್ದ ಭ್ರಷ್ಟ ತಹಶೀಲ್ದಾರ್ ಗೆ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ.!
ಲಂಚದ ಹಣದೊಂದಿಗೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಕಲಬುರಗಿ ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಅವರಿಗೆ ಸಹಕರಿಸಿದ್ದ ಶಿವಾನಂದ ಜಮಖಂಡಿ ಎಂಬುವವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಏನಿದು ಪ್ರಕರಣ?ಕಳೆದ 2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಶಿವಲಿಂಗಯ್ಯ ಎಂಬುವವರ…
-

ರಾಜ್ಯದ ವಿವಿಧೆಡೆ ಲೋಕಾಯುಕ್ತ ರೇಡ್ : ಕುಬೇರರ ಕೋಟಿ ಕೋಟಿ ಆಸ್ತಿ ಕಂಡು ಅಧಿಕಾರಿಗಳೇ ಶಾಕ್..!! ಬರೋಬ್ಬರಿ ₹49.83 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು: ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟು 10 ಜನ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೃಹತ್ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ಕಲಬುರಗಿ, ಶಿವಮೊಗ್ಗ, ರಾಯಚೂರು ಮತ್ತು ತುಮಕೂರು ಸೇರಿದಂತೆ ಒಟ್ಟು 53 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ ಅಧಿಕಾರಿಗಳು ಭಾರಿ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ-ಚರಾಸ್ತಿಗಳ…
-

ಸರ್ಕಾರಿ ಅಧಿಕಾರಿಗೆ ವಿವಸ್ತ್ರಗೊಳಿಸಿ ಹಲ್ಲೆ ಮತ್ತು ಬ್ಲಾಕ್ಮೇಲ್: ರೌಡಿಶೀಟರ್ ಅರೆಸ್ಟ್
ಸರ್ಕಾರಿ ಅಧಿಕಾರಿಯೊಬ್ಬರ ಮೇಲೆಯೇ ನಡೆದ ಹಲ್ಲೆ ಮತ್ತು ಬ್ಲಾಕ್ಮೇಲ್ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಚನ್ನಪಟ್ಟಣದ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಪ್ರಜ್ಞೆ ತಪ್ಪಿಸಿ, ವಿವಸ್ತ್ರಗೊಳಿಸಿ, ವಿಡಿಯೋ ಚಿತ್ರೀಕರಿಸಿಕೊಂಡು 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, “ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲವೇ?” ಎಂಬ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕಿದೆ. ಜೂನ್ 28ರಂದು ಚನ್ನಪಟ್ಟಣದಲ್ಲಿರುವ ತಹಶೀಲ್ದಾರ್ ಅವರ ಅಧಿಕೃತ ವಸತಿ ಗೃಹಕ್ಕೆ ಕೆಲಸದ ನೆಪದಲ್ಲಿ ಸ್ನೇಹಿತರೊಂದಿಗೆ ಬಂದಿದ್ದ ರೌಡಿಶೀಟರ್ ಹಾಗೂ ಆತನ ಗ್ಯಾಂಗ್…
-

ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಭಾರಿ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ರಾಯಚೂರು, ಶಿವಮೊಗ್ಗ ಹಾಗೂ ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಜಾನೆಯೇ ಏಕಕಾಲಕ್ಕೆ ದಾಳಿ ನಡೆಸಿ, ತೀವ್ರ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಕುಂಬಳಗೂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಬಿ.ಕೆ. ತಿಮ್ಮಯ್ಯ ಅವರ ಮನೆ ಮತ್ತು ಕಚೇರಿಗಳ ಮೇಲೆ…
-

ಕುಮಾರ ಸ್ವಾಮಿ, ರಾಮ ನಗರ ಮುಸ್ಲಿಮ್ ಎಸ್.ಐ.ಆರ್ ಮಾತಿಗೆ ಮೊದಲು, ಬಾಂಗ್ಲಾ ಮಾ.ಪ್ರ. ಶೇಕ್ ಹಸೀನಾ ಎಲ್ಲಿದ್ದಾರೆ ಎಂದು ಹೇಳಲಿ: ಕೆ.ಅಶ್ರಫ್.
ಮಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರ ಸ್ವಾಮಿ ಇತ್ತೀಚೆಗೆ ರಾಮ ನಗರ ಕ್ಷೇತ್ರದ ಮಸೀದಿಯ ಸಮುದಾಯ ಸಭಾಂಗಣದಲ್ಲಿ ನಡೆದ ಮುಸ್ಲಿಮ್ ಸಮುದಾಯದ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಬಾಂಗ್ಲಾ ದೇಶದ ಪ್ರಜೆಗಳನ್ನು ಮತದಾರದ ಪಟ್ಟಿಯಲ್ಲಿ ಸೇರ್ಪಡಿಸುತ್ತಿದ್ದಾರೆ ಎಂದು ಸುಳ್ಳು ಆರೋಪದ ಹೇಳಿಕೆ ನೀಡಿರುತ್ತಾರೆ. ಕುಮಾರ ಸ್ವಾಮಿಯವರು ರಾಮನಗರ ಕ್ಷೇತ್ರದ ಈ ಹಿಂದಿನ ಅಭ್ಯರ್ಥಿ ಕೂಡ ಹೌದು. ಈ ಕ್ಷೇತ್ರದಲ್ಲಿ ಈ ಹಿಂದೆ ಮುಸ್ಲಿಮ್ ಅಲ್ಪ ಸಂಖ್ಯಾತರ ಮತ ಪಡೆದು ಹಲವು ಬಾರಿ ಶಾಸಕ, ಸಚಿವರಾದ ಕುಮಾರಸ್ವಾಮಿ ಯಾದಿ,ದೇವೇಗೌಡರ ಕುಟುಂಬಕ್ಕೆ…
-

PDO ಕಿರುಕುಳ ಆರೋಪ : ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ (PDO) ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ಪ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬಿಳಿಚೋಡು ಗ್ರಾಮದ ತಮ್ಮ ನಿವಾಸದಲ್ಲಿ ಶಿವಪ್ಪ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಶಿವಪ್ಪ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದರಲ್ಲಿ…
-

ಬೇಬಿ ಕೇರ್ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ:ಇಬ್ಬರ ಬಂಧನ
ಬೆಂಗಳೂರು: ಬೇಬಿ ಕೇರ್ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುಳಾ, ವಿಜಯಲಕ್ಷ್ಮೀ ಆರೋಪಿಗಳನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಾದ ಭವಾನಿ, ಸಿಂಧು, ಬಿಂದು ಎಂಬವರ ಪಾತ್ರ ಮೇಲ್ನೋಟಕ್ಕೆ ಇಲ್ಲ ಅನ್ನೋದು ಖಾತರಿಯಾಗಿದೆ. ಹಾಗಾಗಿ, ಇಂದು ಮತ್ತೆ ವಿಚಾರಣೆಗೆ ಬರಲು ಮೂವರು ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ಇಬ್ಬರನ್ನು ಬಂಧಿಸಿ ಬೆಳಗ್ಗೆ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜಡ್ಜ್ ಆದೇಶಿಸಿದ್ದಾರೆ. ಬೆಂಗಳೂರಿನ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











