ಮಂಗಳೂರಿನ ಪಾಂಡೇಶ್ವರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಇಲ್ಲಿನ ಶಿವನಗರದ ನಿವಾಸಿಗಳಿಗೆ ಎರಡು ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿದ್ದು, ದಿನನಿತ್ಯದ ಅಗತ್ಯಗಳನ್ನು ಪೂರೈಸಲು ಜನರು ಪರದಾಡುವಂತಾಗಿದೆ.
ಒಂದೆಡೆ ಕುಡಿಯುವ ನೀರಿಗಾಗಿ ಜನರು ಕಾದು ಕುಳಿತಿದ್ದರೆ, ಮತ್ತೊಂದೆಡೆ ಮಹಾನಗರ ಪಾಲಿಕೆಯ ನೀರನ್ನು ವಾಹನ ಸರ್ವಿಸ್ ಸ್ಟೇಷನ್ಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಜನಸಾಮಾನ್ಯರಿಗೆ ಸಮರ್ಪಕವಾಗಿ ನೀರು ಸಿಗದಿರುವ ಸಂದರ್ಭದಲ್ಲಿ, ವಾಣಿಜ್ಯ ಉದ್ದೇಶಗಳಿಗೆ ಪಾಲಿಕೆ ನೀರು ಬಳಕೆಯಾಗುತ್ತಿರುವುದು ಎಷ್ಟು ಸರಿ??
ಸ್ಮಾರ್ಟ್ ಸಿಟಿ ಎಂಬ ಹೆಗ್ಗಳಿಕೆ ಹೊಂದಿರುವ ಮಂಗಳೂರಿನಲ್ಲಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಸಾಧ್ಯವಾಗದಿರುವುದು ವಿಪರ್ಯಾಸವೇ ಸರಿ.
ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಯಾವಾಗ?
ಪಾಲಿಕೆ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿದೆ ಎಂಬ ಆರೋಪದ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆಯೇ?
ವಾಹನ ಸರ್ವಿಸ್ ಸ್ಟೇಷನ್ಗಳಿಗೆ ಪಾಲಿಕೆ ನೀರು ಬಳಕೆಯಾಗುತ್ತಿರುವ ಆರೋಪದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕ್ರಮ ಕೈಗೊಳ್ಳಬೇಕು ಮತ್ತು ಇಲ್ಲಿನ ನೀರಿನ ಸಮಸ್ಯೆಗೆ ಪಾಲಿಕೆಯು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.















